Advertisement

ಹೊಸ ಪಕ್ಷ ಸ್ಥಾಪಿಸಿದ ಮಾಜಿ ಸಚಿವ ಉಪೇಂದ್ರ ಕುಶ್ವಾಹಾ

08:33 PM Feb 20, 2023 | Team Udayavani |

ಪಾಟ್ನಾ:ಬಿಹಾರ ಸಿಎಂ ನಿತೀಶ್‌ ಕುಮಾರ್‌ ಜತೆಗೆ ಮುನಿಸಿಕೊಂಡಿರುವ ಕೇಂದ್ರದ ಮಾಜಿ ಸಚಿವ ಉಪೇಂದ್ರ ಕುಶ್ವಾಹಾ ಜೆಡಿಯು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

Advertisement

ಜತೆಗೆ ರಾಷ್ಟ್ರೀಯ ಲೋಕತಾಂತ್ರಿಕ ಕಾಂಗ್ರೆಸ್‌ ಜನತಾ ದಳ ಎಂಬ ಹೊಸ ಪಕ್ಷ ಸ್ಥಾಪನೆಯ ಘೋಷಣೆಯನ್ನೂ ಮಾಡಿದ್ದಾರೆ. ಜತೆಗೆ ವಿಧಾನ ಪರಿಷತ್‌ ಸದಸ್ಯತ್ವಕ್ಕೂ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

ಸಿಎಂ ನಿತೀಶ್‌ ಕುಮಾರ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ,”ಸಿಎಂ ಅಸಹಾಯಕರಾಗಿದ್ದಾರೆ’ ಎಂದು ದೂರಿದ್ದಾರೆ. ಆರ್‌ಜೆಡಿ ನಾಯಕ, ಡಿಸಿಎಂ ತೇಜಸ್ವಿ ಯಾದವ್‌ ಅವರನ್ನು ಬಿಹಾರದ ಮುಂದಿನ ನಾಯಕ ಎಂದು ನಿತೀಶ್‌ ಘೋಷಣೆ ಮಾಡಿದ ಬಳಿಕ ಇಬ್ಬರ ನಡುವೆ ಭಿನ್ನಾಭಿಪ್ರಾಯ ಹೆಚ್ಚಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next