Advertisement

ಪತ್ರಕರ್ತರಿಗೆ-ಚಿತ್ರರಂಗದವರಿಗೆ ‘ಕಬ್ಜ’ಚಿತ್ರತಂಡದಿಂದ ನೆರವು

03:43 PM May 22, 2021 | Team Udayavani |

ಕೋವಿಡ್ ಸಂಕಷ್ಟದಲ್ಲಿರುವ ಜನರಿಗೆ ಉಪೇಂದ್ರ ಮಾಡುತ್ತಿರುವ ಸಹಾಯಕ್ಕೆ ಇದೀಗ ನಿರ್ದೇಶಕ ಅರ್. ಚಂದ್ರು ಹಾಗೂ ಕಬ್ಜ ಚಿತ್ರತಂಡ ಕೈ ಜೋಡಿಸಿದೆ.

Advertisement

ಖ್ಯಾತ ನಿರ್ದೇಶಕ ಆರ್. ಚಂದ್ರು ಮತ್ತು ಕಬ್ಜ  ಟೀಂ ವತಿಯಿಂದ 1 ಲಕ್ಷ ರೂಪಾಯಿ ಹಣ ಮತ್ತು ದಿನಸಿ ತರಕಾರಿ ಕಿಟ್ ಗಳನ್ನು ನೀಡಿದೆ. ಇವುಗಳನ್ನು ಚಿತ್ರರಂಗದವರಿಗೆ ಹಾಗೂ ಪತ್ರಕರ್ತರಿಗೆ ನೀಡಲು ಅವರು ಇಚ್ಚಿಸಿದ್ದಾರೆ.

ಇನ್ನು ಲಾಕ್ ಡೌನ್ ನಿಂದ ಕೆಲಸವಿಲ್ಲದೆ ಒಂದೊತ್ತಿನ ಊಟಕ್ಕೂ ಪರದಾಡುತ್ತಿರುವ ಸಿನಿ ಕಾರ್ಮಿಕರ ಕಷ್ಟಕ್ಕೆ ರಿಯಲ್ ಸ್ಟಾರ್ ಉಪೇಂದ್ರ ನೆರವಾಗಿದ್ದಾರೆ.

ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸಿ ಕಷ್ಟದಲ್ಲಿರೋರಿಗೆ ಸಹಾಯ ಹಸ್ತ ಚಾಚುತ್ತಿದ್ದಾರೆ. ಉಪೇಂದ್ರ ಫೌಂಡೇಶನ್ ಗೆ ಸಾಕಷ್ಟು ಮಂದಿ ಸಿನಿ ಕಲಾವಿದರು ದೇಣಿಗೆ ನೀಡಿದ್ದಾರೆ. ಸಾಧು ಕೋಕಿಲಾ, ಶೋಭರಾಜ್, ಹಿರಿಯ ನಟಿ ಸರೋಜಾ ದೇವಿ, ಪವನ್ ಒಡೆಯರ್, ನಟಿ ಮಾನ್ಯಾ ಸೇರಿದಂತೆ ಸಾಕಷ್ಟು ಮಂದಿ ಉಪ್ಪಿ ಜೊತೆ ಕೈ ಜೋಡಿದ್ದಾರೆ.

ಇದೀಗ ರಿಯಲ್ ಸ್ಟಾರ್ ನಟನೆಯ ಕಬ್ಜ ಸಿನಿಮಾತಂಡ ಕೂಡ ಉಪ್ಪಿ ಜೊತೆ ಕೈ ಜೋಡಿಸಿದೆ. ಕಬ್ಜ ಸಿನಿಮಾದ ನಿರ್ದೇಶಕ ಆರ್.ಚಂದ್ರು ಮತ್ತು ತಂಡದಿಂದ 1 ಲಕ್ಷ ರೂ. ದೇಣಿಗೆ ನೀಡುವ ಮೂಲಕ ಚಿತ್ರಕಾರ್ಮಿಕರ ನೆರವಿಗೆ ನಿಂತಿದ್ದಾರೆ. ಈ ಬಗ್ಗೆ ರಿಯಲ್ ಸ್ಟಾರ್ ಉಪೇಂದ್ರ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next