Advertisement

ಪಕ್ಷದಲ್ಲಿ ಭಿನ್ನಾಭಿಪ್ರಾಯ:ಗಿರೀಶ್ ಉಪ್ಪಾರರಿಂದ ನಿಗಮ ಅಧ್ಯಕ್ಷ ಸ್ಥಾನ ವಾಪಾಸ್ ಪಡೆದ ಸರ್ಕಾರ

02:43 PM Dec 03, 2020 | keerthan |

ಚಿಕ್ಕಮಗಳೂರು: ರಾಜ್ಯ ಸರ್ಕಾರವು ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಗಿರೀಶ್ ಉಪ್ಪಾರ ರನ್ನು ನೇಮಿಸಿದ್ದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನವನ್ನು ರಾಜ್ಯ ಸರ್ಕಾರ ವಾಪಾಸ್ ಪಡೆದಿದೆ.

Advertisement

ಗಿರೀಶ್ ಉಪ್ಪಾರ ಅವರ ನೇಮಕವನ್ನು ವಿರೋಧಿಸಿ ಇತ್ತೀಚೆಗೆ ಕಡೂರು ತಾಲ್ಲೂಕು ಬಿಜೆಪಿ ಮಂಡಲ ಸದಸ್ಯರು ಸೇರಿದಂತೆ. ಜಿ.ಪಂ., ತಾ.ಪಂ, ಪುರಸಭೆ, ಪಟ್ಟಣ ಪಂಚಾಯತ್ ಸದಸ್ಯರು ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದರು.

ಇದನ್ನೂ ಓದಿ:ಶಿಸ್ತು ಸಮಿತಿ ಸ್ಪಂದಿಸದಿದ್ದರೆ ಎಐಸಿಸಿಗೆ ಪತ್ರ ಬರೆಯುತ್ತೇನೆ: ಅಖಂಡ ಶ್ರೀನಿವಾಸ ಮೂರ್ತಿ

ರಾಜೀನಾಮೆ ವಿಚಾರವನ್ನು ಜಿಲ್ಲಾ ಬಿಜೆಪಿ ಮುಖಂಡರು ರಾಜ್ಯ ಮುಖಂಡರ ಗಮನಕ್ಕೆ ತರಲಾಗಿತ್ತು. ಈ ಹಿನ್ನಲೆಯಲ್ಲಿ ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರಾಗಿ ಗಿರೀಶ್ ಉಪ್ಪಾರ ಅವರ ನೇಮಕವನ್ನು ಹಿಂಪಡೆದಿದೆ.

ಇದನ್ನೂ ಓದಿ: ಸಚಿವರಾಗುವ ಆಸೆ ಆಕಾಂಕ್ಷೆ ಎಲ್ಲರಿಗೂ ಇರುತ್ತೆ, ಆದರೆ.. ವಿಶ್ವನಾಥ್ ಗೆ ಸವದಿ ಕಿವಿಮಾತು

Advertisement
Advertisement

Udayavani is now on Telegram. Click here to join our channel and stay updated with the latest news.

Next