Advertisement

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

08:34 PM May 10, 2024 | Team Udayavani |

ಬೆಂಗಳೂರು: ಆಗ್ನೇಯ ಶಿಕ್ಷಕರ ಕ್ಷೇತ್ರ ಹಾಗೂ ಬೆಂಗಳೂರು ಪದವೀಧರ ಕ್ಷೇತ್ರಗಳಿಂದ ವಿಧಾನಪರಿಷತ್ತಿಗೆ ಜೂ.3 ರಂದು ನಡೆಯಲಿರುವ ದ್ವೈವಾರ್ಷಿಕ ಚುನಾವಣೆಯಲ್ಲಿ ಮತದಾರರ ಬಲಗೈ ತೋರು ಬೆರಳಿಗೆ ಶಾಯಿ ಹಾಕಲು ಚುನಾವಣ ಆಯೋಗ ನಿರ್ಧರಿಸಿದೆ.

Advertisement

ರಾಜ್ಯದಲ್ಲಿ ಇತ್ತೀಚೆಗಷ್ಟೇ ಲೋಕಸಭಾ ಚುನಾವಣೆ ನಡೆದಿದ್ದು, ಈ ಎರಡು ಕ್ಷೇತ್ರಗಳ ವ್ಯಾಪ್ತಿಯ ಮತದಾರರ ಎಡಗೈ ತೋರು ಬೆರಳಿಗೆ ಈಗಾಗಲೇ ಅಳಿಸಲಾಗದ ಶಾಯಿ ಹಾಕಲಾಗಿದೆ. ಗೊಂದಲ ಸೃಷ್ಟಿ ಆಗಬಾರದು, ಮತದಾನ ಮಾಡಿದ ಬಗ್ಗೆ ಖಾತ್ರಿಯೂ ಸಿಗಬೇಕು ಎನ್ನುವ ದೃಷ್ಟಿಯಿಂದ ಆಯೋಗ ಈ ನಿರ್ಧಾರ ತೆಗೆದುಕೊಂಡಿದೆ.

 

Advertisement

Udayavani is now on Telegram. Click here to join our channel and stay updated with the latest news.

Next