Advertisement

ಉತ್ತಮ ಸಮಾಜಕ್ಕಾಗಿ “ಉಪ್ಪಿ’ಪ್ರಣಾಳಿಕೆ: ಟ್ವೀಟ್

04:41 PM Dec 15, 2018 | |

ಸ್ಯಾಂಡಲ್‍ವುಡ್‍ನ ರಿಯಲ್ ಸ್ಟಾರ್, ನಟ, ನಿರ್ದೇಶಕ, ಹಾಗೂ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಇದೀಗ ತಮ್ಮ ಪಕ್ಷದ ಸಂಘಟನೆಯಲ್ಲಿ ತೊಡಗಿದ್ದು, ಶುಕ್ರವಾರ ತಮ್ಮ ಟ್ವೀಟರ್ ಖಾತೆಯಲ್ಲಿ ಸಂಭಾವ್ಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಅಲ್ಲದೇ ಈ ಪ್ರಣಾಳಿಕೆಯ ಬಗ್ಗೆ ಅನಿಸಿಕೆ ತಿಳಿಸುವಂತೆ ಹಾಗೂ ಅದನ್ನು ಶೇರ್ ಮಾಡುವಂತೆ ಮನವಿ ಕೂಡಾ ಮಾಡಿದ್ದಾರೆ.

Advertisement

ಹೌದು, ಉಪೇಂದ್ರ ಇದೀಗ ನಟನೆಯಿಂದ ಕೊಂಚ ಬ್ರೇಕ್ ಪಡೆದಿದ್ದು, ಪಕ್ಷದ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ. ಈ ಹಿಂದೆ ಉಪೇಂದ್ರ “ಕೆಪಿಜೆಪಿ’ ಪಕ್ಷದ ಮೂಲಕ ರಾಜ್ಯದಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದ್ದರು. ಬಳಿಕ ಭಿನ್ನಾಭಿಪ್ರಾಯದಿಂದ ಪಕ್ಷ ತೊರೆದು “ಯುಪಿಪಿ’ (ಉತ್ತಮ ಪ್ರಜಾಕೀಯ ಪಾರ್ಟಿ) ಪಕ್ಷ ಸ್ಥಾಪಿಸಿದ್ದು, ಈಗ ಪಕ್ಷ ಸಂಘಟನೆಗಾಗಿ ಪ್ರಣಾಳಿಕೆಯನ್ನು ಟ್ವೀಟರ್ ನಲ್ಲಿ ಬಿಡುಗಡೆ ಮಾಡಿದ್ದಾರೆ.
 

* ನಮ್ಮದು ಪಾರದರ್ಶಕ, ಸರಳ, ಪ್ರಜೆಗಳನ್ನೊಳಗೊಂಡ ಆಡಳಿತ.
* ದೂರುಗಳನ್ನ ಸಲ್ಲಿಸಿಲು ಪ್ರಜೆಗಳಿಗಾಗಿ ಮೊಬೈಲ್​ ಅಪ್ಲಿಕೇಶನ್.​
* ಪ್ರಜೆಗಳ ನೇರ ಸಂಪರ್ಕಕ್ಕಾಗಿ, ಸರ್ಕಾರದಿಂದ ಸರ್ಕಾರದ್ದೇ ಆದ ಟೆಲಿವಿಷನ್​ ಚಾನಲ್​ ಆರಂಭ.
* ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್​ ಕಡ್ಡಾಯ.
* ಕಡ್ಡಾಯವಾಗಿ ಸರ್ಕಾರಿ ನೌಕರರರು ಏಕರೂಪದ ಸಮವಸ್ತ್ರ ಧರಿಸುತ್ತಾರೆ.
* ಪ್ರತಿಯೊಂದು ಸರ್ಕಾರಿ ಯೋಜನೆಗಳು ಮತ್ತು ಟೆಂಡರ್​ಗಳ ಪ್ರಕಿಯೆ ಸಂಪೂರ್ಣ ಆನ್​ಲೈನ್​ನಲ್ಲೇ ಚರ್ಚೆ ಮತ್ತು ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ.
* ವಿಧಾನಸೌಧದಲ್ಲಿ ನಡೆಯುವಂತಹ ಪ್ರತಿಯೊಂದು ಚಟುವಟಿಕೆಗಳಿಗೆ ದಾಖಲೆ, ಪುರಾವೆ ಮತ್ತು ದೃಶ್ಯ ಮಾಧ್ಯಮಗಳು ಸಾಕ್ಷಿ.
* ಸಚಿವರು, ಶಾಸಕರು, ಕಾರ್ಪೊರೇಟರ್​ಗಳು, ಹಾಗೂ ಎಲ್ಲಾ ಸರ್ಕಾರಿ ಅಧಿಕಾರಿಗಳು ಯೋಜನೆಗಳ ಅಧಿಕೃತ ದಾಖಲೆ ಪುರಾವೆಗಳೊಂದಿಗೆ ಅಧಿವೇಶನದಲ್ಲಿ ಭಾಗವಹಿಸಬೇಕು. ಎಲ್ಲಾ ಪ್ರಕಿಯೆಗಳನ್ನು ಕಡ್ಡಾಯವಾಗಿ ನೇರ ಪ್ರಸಾರದಲ್ಲಿ ಟಿ.ವಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರಿಸಬೇಕು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next