Advertisement

Uppinangady ಬೈಕ್‌-ಕಾರು ಢಿಕ್ಕಿ: ಸವಾರ ಸಾವು

09:50 PM Jun 05, 2024 | Team Udayavani |

ಉಪ್ಪಿನಂಗಡಿ: ಬೈಕ್‌ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪ ರೆಖ್ಯ ಗ್ರಾಮದ ನೇಲ್ಯಡ್ಕ ಎಂಬಲ್ಲಿ ಜೂ. 5ರ ಬುಧವಾರ ರಾತ್ರಿ ನಡೆದಿದೆ.

Advertisement

ಮೃತಪಟ್ಟವರನ್ನು ರೆಖ್ಯ ಗ್ರಾಮದ ನಾಳಾಲು ನಿವಾಸಿ ರವಿ (47) ಎಂದು ಗುರುತಿಸಲಾಗಿದೆ.

ಇವರು ಬೈಕ್‌ನಲ್ಲಿ ಮನೆ ಕಡೆಗೆ ಬರುತ್ತಿದ್ದ ವೇಳೆ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ನಡುವೆ ಢಿಕ್ಕಿ ಸಂಭವಿಸಿ ಈ ಅಪಘಾತ ನಡೆದಿದೆ.

ಮೇಲ್ಸೇತುವೆಯಲ್ಲೇ ಅಪಘಾತ
ರಸ್ತೆಯ ಎರಡು ಬದಿ ಅಂಗಡಿ, ಮನೆಗಳಿದ್ದರಿಂದ ಇಲ್ಲಿ ಮೇಲ್ಸೇತುವೆ ರಚನೆಯಾಗಿದೆ. ಕಾಮಗಾರಿ ಸಂಪೂರ್ಣವಾಗಿಲ್ಲ. ಆದರೂ ಮೂರ್‍ನಾಲ್ಕು ವಾರಗಳ ಹಿಂದೆ ಮೇಲ್ಸೇತುವೆಯ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇದೀಗ ಈ ಮೇಲ್ಸೇತುವೆಯಲ್ಲೇ ಕಾರು ಹಾಗೂ ಬೈಕ್‌ ನಡುವೆ ಡಿಕ್ಕಿ ಸಂಭವಿಸಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next