Advertisement

Uppinangady ಗಾಂಜಾ ಸೇವಿಸಿ ಅನುಚಿತ ವರ್ತನೆ: ವಶಕ್ಕೆ

07:27 PM Sep 18, 2023 | Team Udayavani |

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ 34 ನೇ ನೆಕ್ಕಿಲಾಡಿಯ ಬಸ್‌ ತಂಗುದಾಣದ ಬಳಿ ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕವಾಗಿ ಅನುಚಿತವಾಗಿ ವರ್ತಿಸುತ್ತಿದ್ದ ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ನಿವಾಸಿ ವೆಂಕಟೇಶ್‌ (32)ನನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Advertisement

ಅನುಚಿತ ವರ್ತನೆಯ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ವಿಚಾರಿಸಿದಾಗ ತಾನು ಗಾಂಜಾ ಸೇವಿಸಿರುವುದನ್ನು ಆರೋಪಿ ಒಪ್ಪಿಕೊಂಡಿದ್ದ. ಪೊಲೀಸರು ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next