Advertisement

Uppinangady ಕೆಎಸ್‌ಆರ್‌ಟಿಸಿ ಬಸ್‌-ಲಾರಿ ಢಿಕ್ಕಿ; ಜಖಂ

11:44 PM Jul 23, 2024 | Team Udayavani |

ಉಪ್ಪಿನಂಗಡಿ: ಇಲ್ಲಿನ ಗುಂಡ್ಯ ಸಮೀಪದ ಬರ್ಚಿನಹಳ್ಳದಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದಕ್ಕೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ವಾಹನಗಳೆರಡೂ ಜಖಂಗೊಂಡು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಮಂಗಳವಾರ ನಡೆದಿದೆ.

Advertisement

ಕನಕಪುರದಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಗಳನ್ನು ಕರೆತರುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿಗೆ ಎದುರುಗಡೆಯಿಂದ ಬಂದ ಲಾರಿಯು ಢಿಕ್ಕಿ ಹೊಡೆದಾಗ ಎರಡೂ ವಾಹನಗಳು ಜಖಂಗೊಂಡಿತು. ಹಾಗೆಯೇ ಬಸ್ಸಿನಲ್ಲಿದ್ದ ಸುಮಾರು 15 ಮಂದಿ ಪ್ರಯಾಣಿಕರಿಗೆ ಗುದ್ದಿದ ರೀತಿಯಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಉಪ್ಪಿನಂಗಡಿ ಪೊಲೀಸರು ಘಟನ ಸ್ಥಳಕ್ಕೆ ಭೇಟಿ ನೀಡಿ ಹೆದ್ದಾರಿ ಸಂಚಾರವನ್ನು ಸುಗಮಗೊಳಿಸಲು ಶ್ರಮಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next