Advertisement

Uppinangady ಲಾವತಡ್ಕ: ಅಕ್ರಮ ಸಾಗಾಟದ ಮರ ವಶ

09:56 PM Oct 14, 2023 | Team Udayavani |

ಉಪ್ಪಿನಂಗಡಿ: ದಾಖಲೆ ಪತ್ರಗಳಿಲ್ಲದೆ ಅಕ್ರಮ ಮರಮುಟ್ಟು ಸಾಗಿಸುತ್ತಿದ್ದ ಪ್ರಕರಣವನ್ನು ಅರಣ್ಯ ಇಲಾಖೆ ಸಿಬಂದಿ ಪತ್ತೆ ಹಚ್ಚಿದ್ದಾರೆ.

Advertisement

ರಾಷ್ಟ್ರೀಯ ಹೆದ್ದಾರಿ 75ರ ರೆಖ್ಯಾ ಗ್ರಾಮದ ಲಾವತಡ್ಕ ಎಂಬಲ್ಲಿ ವಿವಿಧ ಜಾತಿಯ ಮರಗಳನ್ನು ಲಾರಿಯೊಂದರಲ್ಲಿ ಸಾಗಿಸುತ್ತಿದ್ದ ಖಚಿತ ವರ್ತಮಾನದ ಮೇರೆಗೆ ವಾಹನವನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಅಕ್ರಮ ಸಾಗಾಟ ಎಂದು ತಿಳಿದು ಬಂತು. ಈ ಸಂದರ್ಭ ಲಾರಿಯಲ್ಲಿದ್ದ ಬೆಳ್ತಂಗಡಿ ತಾಲೂಕಿನ ಕೊಕ್ಕಡ ನಿವಾಸಿ ಶಾಹುಲ್‌ ಹಮೀದ್‌ ಪರಾರಿಯಾಗಿದ್ದಾನೆ.

ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ ಕೆ.ಕೆ. ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ. ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಸಂತೋಷ, ಅರಣ್ಯ ಪಾಲಕ ನಿಂಗಪ್ಪ ಅವಾರಿ ಮತ್ತು ಸುನಿಲ್‌ ನಾಯ್ಕ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next