Advertisement

Uppinangady: ಲಾಟರಿ ವದಂತಿ: ಹೈರಾಣಾದ ಟೈಲರ್‌!

12:27 PM Jul 12, 2024 | Team Udayavani |

ಉಪ್ಪಿನಂಗಡಿ: ಕೇರಳ ರಾಜ್ಯ ಲಾಟರಿಯ ಒಂದು ಕೋಟಿ ರೂಪಾಯಿ ಬಹುಮಾನವು ಇಲ್ಲಿನ ಟೈಲರ್‌ ಒಬ್ಬರಿಗೆ ಒಲಿದಿದೆ ಎಂಬ ಸುದ್ದಿ ಹರಡಿ ಅಭಿನಂದನೆಯ ಕರೆ, ಸಹಾಯ ಯಾಚನೆಯ ಕರೆಗೆ ಟೈಲರ್‌ ಹೈರಾಣಾಗುವಂತಾಗಿದೆ.

Advertisement

ಇಲ್ಲಿನ ರಥಬೀದಿಯಲ್ಲಿರುವ ಗಣಪತಿ ಮಠದ ಬಳಿಯಲ್ಲಿ ಟೈಲರ್‌ ವೃತ್ತಿ ಮಾಡಿಕೊಂಡಿರುವ ಕೂಸಪ್ಪ ಅವರಿಗೆ ಒಂದು ಕೋಟಿ ರೂಪಾಯಿ ಒಲಿದಿದೆ ಎಂಬ ಸುದ್ದಿ ಕೆಲವು ದಿನಗಳಿಂದ ಹರಿದಾಡುತ್ತಿತ್ತು.

ಮಾತ್ರವಲ್ಲದೆ ಅದರಲ್ಲಿ 30 ಲಕ್ಷ ರೂಪಾಯಿ ತೆರಿಗೆ ನೆಲೆಯಲ್ಲಿ ಕಡಿತಗೊಂಡು 70 ಲಕ್ಷ ರೂಪಾಯಿ ಅವರ ಖಾತೆಗೆ ಜಮೆಯಾಗಿದೆ ಎಂಬ ವಿವರ ಸೇರಿಸಿ ಬಾಯಿಯಿಂದ ಬಾಯಿಗೆ ಸಾಗಿತು.

ಈ ಬಗ್ಗೆ ಅವರನ್ನು ಮಾಧ್ಯಮದವರು ಭೇಟಿಯಾದಾಗ ಅವರಿಗೆ ಲಾಟರಿ ಬಹುಮಾನ ಬಂದಿಲ್ಲ ಎಂಬುದು ತಿಳಿಯಿತು. ತನಗೆ
ಯಾವ ಲಾಟರಿಯೂ ಲಭಿಸಿಲ್ಲ. ಇಂಥ ಸುದ್ದಿ ಹೇಗೆ ಸೃಷ್ಟಿಯಾಯಿತು ಎನ್ನುವುದೇ ನನಗೆ ಅರ್ಥವಾಗುತ್ತಿಲ್ಲ. ಆದರೆ ನನಗೆ ದೂರವಾಣಿ ಕರೆಗಳಿಗೆ ಉತ್ತರಿಸಿ ಸಾಕುಸಾಕಾಗಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next