Advertisement

Uppinangady ನಾಪತ್ತೆಯಾಗಿದ್ದ ಮಹಿಳೆ ಪತ್ತೆ ಪತಿಯೊಂದಿಗೆ ತೆರಳಲು ನಕಾರ

10:55 PM Sep 02, 2024 | Team Udayavani |

ಉಪ್ಪಿನಂಗಡಿ: ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯ ಸಿರಿಬಾಗಿಲು ಗ್ರಾಮದ ದೇರಣೆ ಎಂಬಲ್ಲಿಂದ ನಾಪತ್ತೆಯಾಗಿದ್ದ 31 ವರ್ಷ ಪ್ರಾಯದ ವಿವಾಹಿತ ಮಹಿಳೆ ಮಂಗಳೂರಿನಲ್ಲಿ ಪತ್ತೆಯಾಗಿದ್ದು, ಪತಿ ಮಕ್ಕಳನ್ನು ತೊರೆದು ಸ್ವತಂತ್ರಳಾಗಿ ಜೀವನ ನಡೆಸುವೆನೆಂದು ಆಕೆ ಪೊಲೀಸರಲ್ಲಿ ತಿಳಿಸಿದ್ದಾಳೆ.

Advertisement

ದೇರಣೆ ನಿವಾಸಿ ನಾರಾಯಣ ಅವರು, ಪತ್ನಿ ಆ. 23ರಂದು ಪುತ್ತೂರಿನ ಸಿಟಿ ಆಸ್ಪತ್ರೆಗೆ ಹೋಗಿ ಬರುವೆನೆಂದು ಹೇಳಿ ಹೋದಾಕೆ ನಾಪತ್ತೆಯಾಗಿದ್ದಾರೆಂದು ಪೊಲೀಸರಿಗೆ ದೂರು ಸಲ್ಲಿಸಿದ್ದರು. ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದಾಗ ಮಂಗಳೂರಿನ ಪಿ.ಜಿ.ಯೊಂದರಲ್ಲಿ ವಾಸ್ತವ್ಯವಿದ್ದ ಮಹಿಳೆಯನ್ನು ಪತ್ತೆ ಮಾಡಿದ್ದರು.

ತನಗೆ ಗಂಡನೊಂದಿಗೆ ಜೀವನ ನಡೆಸಲು ಅಸಾಧ್ಯ. ಅದಕ್ಕಾಗಿ ಇಬ್ಬರು ಮಕ್ಕಳನ್ನು ಮತ್ತು ಪತಿಯನ್ನು ತೊರೆದು ಮಂಗಳೂರಿನಲ್ಲಿ ಉದ್ಯೋಗವೊಂದಕ್ಕೆ ಸೇರಿರುವುದಾಗಿ ಮಹಿಳೆ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next