Advertisement

Uppinangady: ನೆಲ್ಯಾಡಿಯ ಕಾಲೇಜು ವಿದ್ಯಾರ್ಥಿ ನಾಪತ್ತೆ

01:23 AM Sep 23, 2024 | Team Udayavani |

ಉಪ್ಪಿನಂಗಡಿ: ಇಲ್ಲಿನ ಠಾಣಾ ವ್ಯಾಪ್ತಿಯ ನೆಲ್ಯಾಡಿಯ ವಿವಿ ಕಾಲೇಜಿನಲ್ಲಿ ಪ್ರಥಮ ಬಿಎ ವಿದ್ಯಾರ್ಥಿಯಾಗಿರುವ ಹತ್ಯಡ್ಕ ಗ್ರಾಮದ ನಿವಾಸಿ ಎಂ. ವಿಜಯಚಂದ್ರ ಅವರ ಪುತ್ರ ತೀರ್ಥೇಶ ಎಂ. (18) ಶನಿವಾರದಿಂದ ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಶನಿವಾರ ಮುಂಜಾನೆ ಮನೆಯಿಂದ ಕಾಲೇಜಿಗೆಂದು ಹೊರಟಾತ ಕಾಲೇಜಿನಲ್ಲಿ ವಾಲಿಬಾಲ್‌ ಪಂದ್ಯಾಟವಿದೆ ಎಂಬ ಕಾರಣ ನೀಡಿ ಬಟ್ಟೆ ಬರೆಗಳನ್ನು ಕೊಂಡೊಯ್ದಿದ್ದನೆಂದೂ, ಶನಿವಾರ ಸಂಜೆ ನೆಲ್ಯಾಡಿ ಪೇಟೆಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದುದ್ದನ್ನು ಸಹಪಾಠಿಗಳು ಕಂಡಿರುವುದಾಗಿಯೂ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next