Advertisement

Uppinangady ಸರಣಿ ಅಪಘಾತ: ಎರಡು ಬಸ್‌, ಟೆಂಪೋ ಢಿಕ್ಕಿ

12:48 AM Jun 30, 2024 | Team Udayavani |

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಶಿರಾಡಿ ಗ್ರಾಮದ ಗುಂಡ್ಯ ಬಳಿ ಐರಾವತ ಬಸ್ಸು , ಗೂಡ್ಸ್‌ ಟೆಂಪೋ ಹಾಗೂ ರಾಜಹಂಸ ಬಸ್ಸುಗಳ ನಡುವೆ ಸರಣಿ ಅಪಘಾತ ಸಂಭವಿಸಿ ಹೆದ್ದಾರಿ ಸಂಚಾರ ಒಂದು ಗಂಟೆಗಳ ಕಾಲ ಸ್ಥಗಿತವಾದ ಘಟನೆ ಶನಿವಾರ ಸಂಭವಿಸಿದೆ.

Advertisement

ಪುತ್ತೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಐರಾವತ ಬಸ್ಸು ಗೂಡ್ಸ್‌ ಟೆಂಪೋವನ್ನು ಹಿಂದಿಕ್ಕಲು ಯತ್ನಿಸಿದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಟೆಂಪೋ ಚಾಲಕ ನಿಯಂತ್ರಣ ಕಳೆದುಕೊಂಡು ಎದುರುಗಡೆಯಿಂದ ಬರುತ್ತಿದ್ದ ರಾಜಹಂಸಕ್ಕೆ ಢಿಕ್ಕಿ ಹೊಡೆದು ಹೆದ್ದಾರಿ ಬದಿಯ ಹಳ್ಳಕ್ಕೆ ಬಿದ್ದಿದೆ. ಇದೇ ವೇಳೆ ರಾಜಹಂಸ ಬಸ್ಸಿಗೆ ಐರಾವತ ಬಸ್ಸು ಢಿಕ್ಕಿ ಹೊಡೆದು ಹೆದ್ದಾರಿಗಡ್ಡ ನಿಂತಿತ್ತು.
ಅದೃಷ್ಟವಶಾತ್‌ ಪ್ರಾಣಾಪಾಯ ಸಂಭವಿಸಿಲ್ಲ.

ಒಂದಷ್ಟು ಮಂದಿ ಪ್ರಯಾಣಿಕರಿಗೆ ಗುದ್ದಿದ ಗಾಯವಾಗಿದೆ. ಸ್ಥಳೀಯ ನಾಗರಿಕರು ಹಾಗೂ ಪೊಲೀಸರು ಸಕಾಲಿಕ ಕಾರ್ಯಾಚರಣೆ ನಡೆಸಿ ಒಂದು ಗಂಟೆಯ ಬಳಿಕ ಹೆದ್ದಾರಿ ಸಂಚಾರ ವನ್ನು ಪುನರಾರಂಭಗೊಳಿಸಲಾಯಿತು. ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next