Advertisement

Uppinangady: ಪತ್ನಿಗೆ ಚೂರಿ ಇರಿತ

02:15 AM Jul 30, 2024 | Team Udayavani |

ಉಪ್ಪಿನಂಗಡಿ: ಪತ್ನಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಮನೆಯವರು ಸೇರಿ ಪಿಲಿಗೂಡು ಎಂಬಲ್ಲಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

Advertisement

ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಜೋರು ಕಟ್ಟೆಯ ನಿವಾಸಿ ಮುಹಮ್ಮದ್‌ ಅವರ ಪುತ್ರಿ ಸಜರಾ (40) ಇರಿತಕ್ಕೊಳಗಾದವರು. ಈಕೆಯ ಪತಿ ಮಡಂತ್ಯಾರು ಸಮೀಪದ ಕೊಲತ್ತಬೈಲು ಮಾಲಾಡಿ ನಿವಾಸಿ ಹಕೀಂ ಹಲ್ಲೆ ಆರೋಪಿ.
ಹಕೀಂ ಮತ್ತು ಸಜರಾ ವಿವಾಹ 15 ವರ್ಷಗಳ ಹಿಂದೆ ನಡೆದಿದ್ದು, ಮದುವೆಯಾದ ಕೆಲವು ವರ್ಷಗಳ ಬಳಿಕ ಹಕೀಂ ಪತ್ನಿಗೆ ಹಿಂಸೆ ನೀಡಲು ಆರಂಭಿಸಿದ್ದ.

ಈ ಹಿನ್ನೆಲೆಯಲ್ಲಿ ಸಜರಾ ಮೂರು ವರ್ಷದಿಂದ ಜೋರುಕಟ್ಟೆಯಲ್ಲಿರುವ ತನ್ನ ತವರು ಮನೆಗೆ ಬಂದು ಮಕ್ಕಳೊಂದಿಗೆ ನೆಲೆಸಿದ್ದರು. ಶುಕ್ರವಾರ ಮಧ್ಯಾಹ್ನ ಚೂರಿ ಹಿಡಿದುಕೊಂಡು ಇಲ್ಲಿಗೆ ಬಂದ ಹಕೀಂ ಏಕಾಏಕಿ ಸಜರಾ ಅವರ ಮೇಲೆ ಹಲ್ಲೆ ನಡೆಸಿದ್ದಾನೆ.

Advertisement

Udayavani is now on Telegram. Click here to join our channel and stay updated with the latest news.

Next