Advertisement

Uppunda: ರಸ್ತೆ ವಿಭಾಜಕಕ್ಕೆ ಬಡಿದ ಬೈಕ್‌: ಇಬ್ಬರು ಗಂಭೀರ

12:12 AM Jul 31, 2024 | Team Udayavani |

ಉಪ್ಪುಂದ: ರಾಜಸ್ಥಾನ ಮೂಲದ ಇಬ್ಬರು ಯುವಕರು ಮಂಗಳವಾರ ಬೈಂದೂರು ಕಡೆಯಿಂದ ಕುಂದಾಪುರದತ್ತ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೈಕಿನಲ್ಲಿ ಪ್ರಯಾಣಿಸುತ್ತಿದ್ದಾಗ ನಾಯ್ಕನ ಕಟ್ಟೆಯ ಫ್ಲೈಓವರ್‌ ಮೇಲೆ ನಿಯಂತ್ರಣ ತಪ್ಪಿ ರಸ್ತೆ ವಿಭಾಜಕಕ್ಕೆ ಢಿಕ್ಕಿ ಹೊಡೆಯಿತು. ಇಬ್ಬರೂ ಗಾಯಗೊಂಡಿದ್ದು, ಸ್ಥಳೀಯರು ಆ್ಯಂಬುಲೆನ್ಸ್‌ ಮೂಲಕ ಕರೆತಂದು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು.

Advertisement

ಬೈಕ್‌ ಅಪಘಾತ: ಪಾದಚಾರಿ ಗಂಭೀರ
ಬೈಂದೂರು: ಶಿರೂರು ಕೆಳಪೇಟೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳವಾರ ಮಧ್ಯಾಹ್ನ ರಸ್ತೆ ದಾಟುತ್ತಿದ್ದ ಶಿರೂರು ಗ್ರಾಮದ ಖಾಜಿ ಆಸ್ಲಾಂ ಅವರಿಗೆ ಬೈಂದೂರು ಕಡೆಯಿಂದ ವೇಗವಾಗಿ ಬಂದ ಬೈಕ್‌ ಢಿಕ್ಕಿ ಹೊಡೆದ ಪರಿಣಾಮ ತಲೆ ಹಾಗೂ ಕಾಲಿಗೆ ಗಂಭೀರ ಗಾಯವಾಗಿದೆ. ಬೈಕಿನಲ್ಲಿದ್ದ ಇಬ್ಬರು ಕೂಡ ಗಾಯ ಗೊಂಡಿದ್ದಾರೆ. ಮೂವ ರನ್ನೂ ಕುಂದಾಪುರ ಆಸ್ಪತ್ರೆಗೆ ದಾಖ ಲಿಸ ಲಾಗಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next