Advertisement

Uppunda: ಪಟಾಕಿ ಅಕ್ರಮ ದಾಸ್ತಾನು ಪ್ರಕರಣ ದಾಖಲು

01:16 AM Oct 10, 2024 | Team Udayavani |

ಉಪ್ಪುಂದ: ಶೆಡ್‌ನ‌ಲ್ಲಿ ಅಕ್ರಮವಾಗಿ ಪಟಾಕಿಗಳನ್ನು ದಾಸ್ತಾನು ಇಟ್ಟಿರುವ ಕುರಿತು ಪೊಲೀಸರಿಗೆ ದೂರು ಬಂದ ಹಿನ್ನೆಲೆಯಲ್ಲಿ ಅ.9ರಂದು ಉಪ್ಪುಂದ ಗ್ರಾಮದ ಚಮಟೆಹರ್ಲು ಪ್ರದೇಶಕ್ಕೆ ಬೈಂದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

ಉಪ್ಪುಂದ ಗ್ರಾಮದ ನಿವಾಸಿ ರವಿಚಂದ್ರ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಸುಮಾರು 100 ವಾಸದ ಮನೆಗಳಿರುವ ಪ್ರದೇಶದಲ್ಲಿ ದತ್ತಾತ್ರೇಯ ಅವರು ಶೆಡ್‌ ನಿರ್ಮಾಣ ಮಾಡಿ 3 ತಿಂಗಳಿನಿಂದ ಯಾವುದೇ ಪರವಾನಿಗೆ ಇಲ್ಲದೇ ಸುಡುಮದ್ದುಗಳನ್ನು ದಾಸ್ತಾನು ಮಾಡಿ ವ್ಯಾಪಾರ ಮಾಡುತ್ತಿದ್ದು, ಇದರಿಂದ ಸ್ಥಳೀಯರು ಭಯಗೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next