Advertisement

ನಾಗೂರು : ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲಿಯೇ ಸಾವು

07:36 PM Jun 16, 2022 | Team Udayavani |

ಉಪ್ಪುಂದ : ನಾಗೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿಯಾದ ಪರಿಣಾಮ ಪಾದಾಚಾರಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಜೂ.16ರಂದು ಸಂಜೆ ಸಂಭವಿಸಿದೆ.

Advertisement

ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಯನ್ನು ಸ್ಥಳೀಯ ನಾಗೂರಿನ ನಿವಾಸಿ ಸದಾಶಿವ ಶ್ಯಾನುಭೋಗ್ (45) ಎಂದು ಗುರುತಿಸಲಾಗಿದೆ.

ಗುರುವಾರ ಸಂಜೆ ಸುಮಾರು 5.45ಕ್ಕೆ ಘಟನೆ ನಡೆದಿದೆ. ವ್ಯಾಕ್ಸ್ ವೋಗನ್ ಪೋಲೋ ಕಾರಿನಲ್ಲಿ ಕುಟುಂಬವೊಂದು ಭಟ್ಕಳದಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿತ್ತು. ನಾಗೂರಿನಲ್ಲಿ ಇದೇ ಸಂದರ್ಭ ಸದಾಶಿವ ಶ್ಯಾನುಭೋಗ ಹೆದ್ದಾರಿ ದಾಟಲು ಯತ್ನಿಸಿದ್ದು ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸದಾಶಿವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಸದಾಶಿವ ಶ್ಯಾನುಭೋಗ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದು, ಪ್ರತಿನಿತ್ಯ ನಾಗೂರು ಪೇಟೆಯಲ್ಲಿಯೇ ಸುತ್ತುತ್ತಿದ್ದರು ಎನ್ನಲಾಗಿದೆ. ಬೈಂದೂರು ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಕಾಶ್ಮೀರದಲ್ಲಿ ಮುಂದುವರಿದ ಉಗ್ರ ಸಂಹಾರ: ಗುರುವಾರ ಇಬ್ಬರ ಹತ್ಯೆ

Advertisement
Advertisement

Udayavani is now on Telegram. Click here to join our channel and stay updated with the latest news.

Next