Advertisement

ಉಪ್ಪುಂದ ; ರೈಲು ಢಿಕ್ಕಿ, ರೈಲ್ವೆ ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಸಾವು

09:40 PM May 05, 2022 | Team Udayavani |

ಉಪ್ಪುಂದ ; ರೈಲ್ವೆ ಹಳಿಯಲ್ಲಿ ನಡೆದುಕೊಂಡು ಹೋಗುತ್ತಿರುವ ವ್ಯಕ್ತಿಗೆ ಆಕಸ್ಮಿಕವಾಗಿ ರೈಲು ಢಿಕ್ಕಿ ಹೊಡೆದು ಮೃತಪಟ್ಟಿರುವ ಘಟನೆ ಮೇ.4ರಂದು ಸೇನಾಪುರ ಗ್ರಾಮದ ಗುಡ್ಡೆಯಂಗಡಿಯಲ್ಲಿ ನಡೆದಿದೆ.

Advertisement

ಆಲೂರು ಗ್ರಾಮದ ಮೂಡು ತಾರಿಬೇರು ಗುಡ್ಡಿಮನೆ ಶ್ರೀದೇವಿ ನಿಲಯ ಸೂರ ದೇವಾಡಿಗ (85) ಮೃತಪಟ್ಟ ವ್ಯಕ್ತಿ.

ಮೇ.4ರಂದು ಗುಡ್ಡೆಯಂಗಡಿ ಪೇಟೆಯಲ್ಲಿರುವ ಅಳಿಯನ ಹೋಟೆಲ್ ಗೆ ಹೋಗಿ ಮಾತನಾಡಿ ಹೋಟೆಲ್ ನಿಂದ ಮನೆಗೆ ಹೋಗುವುದಾಗಿ ಹೇಳಿ ಹೋಗಿದ್ದಾರೆ. ಸೇನಾಪುರ ಗ್ರಾಮದ ಗುಡ್ಡೆಯಂಗಡಿ ಬಳಿ ರೈಲ್ವೆ ಟ್ರಾಕ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಸೂರ ದೇವಾಡಿಗರವರಿಗೆ ಆಕಸ್ಮಿಕವಾಗಿ ರೈಲು ಡಿಕ್ಕಿ ಹೊಡೆದು ಮೃತಪಟ್ಟಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಇದನ್ನೂ ಓದಿ : ಕೊರಟಗೆರೆ : ಕಳ್ಳತನಕ್ಕೆ ಹೊಂಚು ಹಾಕುತ್ತಿದ್ದ ಮೂವರು ಅಂತರಾಜ್ಯ ಕಳ್ಳಿಯರ ಬಂಧನ

Advertisement
Advertisement

Udayavani is now on Telegram. Click here to join our channel and stay updated with the latest news.

Next