Advertisement

UP ರ್‍ಯಾಲಿಯಲ್ಲಿ ಗಲಾಟೆ: ಮಾತಾಡದೆ ರಾಹುಲ್‌, ಅಖಿಲೇಶ್‌ ವಾಪಸ್‌!

12:48 AM May 20, 2024 | Team Udayavani |

ಲಕ್ನೋ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್‌ ನಡೆಸಿದ ಜಂಟಿ ರ್‍ಯಾಲಿಯಲ್ಲಿ ನೂಕು ನುಗ್ಗಲಿನಿಂದ ಕಾಲ್ ತುಳಿತದ ಪರಿಸ್ಥಿತಿ ಉಂಟಾಗಿತ್ತು. ಹೀಗಾಗಿ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮತ್ತು ಎಸ್‌ಪಿ ನಾಯಕ ಅಖಿಲೇಶ್‌ ಯಾದವ್‌ ಇಬ್ಬರೂ ಅಲ್ಲಿಂದ ತೆರಳಿದ್ದಾರೆ.

Advertisement

ಸಭೆಯಲ್ಲಿ ಭಾಗಿಯಾಗಿದ್ದ ಎಸ್‌ಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರು ವೇದಿಕೆಯತ್ತ ನುಗ್ಗಲು ಮುಂದಾಗಿದ್ದಾರೆ. ರಾಹುಲ್‌ ಮತ್ತು ಅಖಿಲೇಶ್‌ ಮನವಿ ಮಾಡಿ ದರೂ ಲೆಕ್ಕಿಸದೇ ಬ್ಯಾರಿಕೇಡ್‌ಗಳನ್ನು ಮುರಿದು ಲಗ್ಗೆ ಇಡಲು ಪ್ರಾರಂಭಿಸಿದ್ದರಿಂದ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಭದ್ರತಾ ಲೋಪ ಆಗುವುದನ್ನು ತಪ್ಪಿಸ ಲು ರಾಹುಲ್‌, ಅಖಿಲೇಶ್‌ ಅಲ್ಲಿಂದ ಹೊರಟಿ ದ್ದಾರೆ. ಈ ವಿಡಿಯೋ ಜಾಲತಾಣದಲ್ಲೂ ವೈರಲ್‌ ಆಗಿದೆ.

Advertisement

Udayavani is now on Telegram. Click here to join our channel and stay updated with the latest news.

Next