Advertisement
ಮಂಗಳವಾರ ತಾಪಂ ಸಭಾಭವನದಲ್ಲಿ ಜರುಗಿದ ಸಾಮಾನ್ಯ ಸಭೆಯಲ್ಲಿ ಹಿಂದಿನ ಸಭೆಯಲ್ಲಿ ಚರ್ಚಿಸಿದ ವಿಷಯಗಳನ್ನು ಪ್ರಸ್ತಾಪಿಸಿ ಮಾತನಾಡಿ, ಹಿಂದಿನ ಸಭೆಯಲ್ಲಿ ಮಂಡಿಸಿದ ವಾದ ವಿವಾದಗಳನ್ನು ಠರಾವಿನಲ್ಲಿ ಸರಿಯಾಗಿ ಬರೆಯುವುದಿಲ್ಲ. ಅಲ್ಲದೆ ಸಭೆಯಲ್ಲಿ ಅಧಿಕಾರಿಗಳ ಗಮನವೇ ಇರುವುದಿಲ್ಲ. ಇದರಿಂದ ಸಭೆ ಯಾವ ಪುರುಷಾರ್ಥಕ್ಕೆ ನಡೆಸಬೇಕು ಎಂದು ತಾಪಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
Related Articles
Advertisement
ತಾಪಂ ಸದಸ್ಯ ಜಗದೀಶ ಬ್ಯಾಡಗಿ ಮಾತನಾಡಿ, ಪ್ರವಾಹದಿಂದಾಗಿ ಹೊಳೆಆಲೂರಿನ ಅನೇಕ ಮನೆಗಳು ಬಿದ್ದಿವೆ. ಅಲ್ಲದೇ ಬಹುತೇಕ ವ್ಯಾಪಾರಿಗಳ ಅಂಗಡಿಗಳಿಗೆ ನೀರು ನುಗ್ಗಿದ್ದು, ಕೇವಲ ಬಿದ್ದ ಮನೆಗಳ ಸರ್ವೇ ಕಾರ್ಯ ಮಾಡುತ್ತಿದ್ದು, ವ್ಯಾಪಾರಿಗಳಿಗೆ ಆದ ಹಾನಿಗೆ ಏನು ಮಾಡಬೇಕು. ಈ ಕುರಿತಾಗಿ ಏನು ಕ್ರಮ ಕೈಗೊಂಡಿದ್ದಿರಿ ಎಂದು ತಹಶೀಲ್ದಾರ್ ಶರಣಮ್ಮ ಕಾರಿ ಅವರನ್ನು ಪ್ರಶ್ನಿಸಿದರು. ತಹಶೀಲ್ದಾರ್ ಶರಣಮ್ಮ ಕಾರಿ ಮಾತನಾಡಿ, ಮೇಲಾಧಿಕಾರಿಗಳಿಂದ ಈಗಾಗಲೇ ಸೂಚನೆ ಬಂದಿದ್ದು, ವ್ಯಾಪಾರಸ್ಥರಿಗೆ ಆಗಿರುವ ಹಾನಿಯನ್ನು ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ಒದಗಿಸಿ ಕೊಡಲಾಗುವುದು ಎಂದರು.
ಪ್ರಭು ಮೇಟಿ ಮಾತನಾಡಿ, ಪ್ರವಾಹದಿಂದಾಗಿರುವ ಮನೆ, ಬೆಳೆ ಹಾನಿಗಳನ್ನು ಪಾರದರ್ಶಕವಾಗಿ ಯಾವುದೇ ಒತ್ತಡಕ್ಕೆ ಮಣಿಯದೇ ಸರ್ವೇ ಕಾರ್ಯವನ್ನು ಕೈಗೊಳ್ಳಿ. ನಂತರ ಕೈಗೊಂಡ ಕ್ರಮ ಹಾಗೂ ವಿತರಣೆ ಮಾಡಿರುವ ಪರಿಹಾರದ ಬಗ್ಗೆ ಮುಂದಿನ ಸಭೆಯಲ್ಲಿ ಮಾಹಿತಿ ನೀಡಬೇಕು. ರಸ್ತೆಗಳು ಹಾಳಾಗಿರುವ ಬಗ್ಗೆ ಸಂಬಂಧಿಸಿದ ಇಲಾಖೆ ಸೂಚಿಸುವಂತೆ ತಹಶೀಲ್ದಾರರಿಗೆ ಹೇಳಿದರು.
ಈ ಕುರಿತು ಪ್ರತಿಕ್ರಿಯೆ ನೀಡಿದ ತಹಶೀಲ್ದಾರ್ ಶರಣಮ್ಮ ಕಾರಿ, ಈಗಾಗಲೇ ರಸ್ತೆ ಹಾಳಾಗಿರುವ ಬಗ್ಗೆ ಆಯಾ ಇಲಾಖೆಗೆ ಸೂಚನೆ ನೀಡಲಾಗಿದ್ದು, ತಾತ್ಕಾಲಿಕವಾಗಿ ರಸ್ತೆ ನಿರ್ಮಾಣ ಮಾಡಿ ತದನಂತರ ಸಮರ್ಪಕ ರಸ್ತೆ ನಿರ್ಮಾಣ ಮಾಡುವಂತೆ ಸಂಬಂಧಿಸಿದ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ತಾಪಂ ಅಧ್ಯಕ್ಷೆ ಪ್ರೇಮವ್ವ ನಾಯಕ, ಉಪಾಧ್ಯಕ್ಷೆ ಇಂದಿರಾ ತೇಲಿ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ವಿ.ಎಫ್. ಪಾಟೀಲ, ಬಿ.ಆರ್. ಬೇವಿನಮರದ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.