Advertisement

Anganwadi ಶಿಕ್ಷಕಿಯಾಗಲು ಉರ್ದು ಅರ್ಹತೆ: ನಳಿನ್‌ ಖಂಡನೆ

12:34 AM Sep 25, 2024 | Team Udayavani |

ಮಂಗಳೂರು: ಮೂಡಿಗೆರೆಯಲ್ಲಿ ಅಂಗನವಾಡಿ ಶಿಕ್ಷಕಿಯಾಗಿ ನೇಮಕವಾಗಲು ಉರ್ದು ಭಾಷೆ ಗೊತ್ತಿರಬೇಕು ಎಂದು ಅಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುತ್ತೋಲೆ ಹೊರಡಿಸಿದ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಖಂಡನೆ ವ್ಯಕ್ತಪಡಿಸಿದ್ದಾರೆ.

Advertisement

ಅಂಗನವಾಡಿ ಶಿಕ್ಷಕಿ ಕೆಲಸ ಸಿಗಬೇಕಾದರೆ ಉರ್ದು ಭಾಷೆ ಗೊತ್ತಿರಬೇಕು ಎಂಬ ಕಾಂಗ್ರೆಸ್‌ ಸರಕಾರದ ಘೋಷಣೆ ಖಂಡನೀಯ.

ಅಂಗನವಾಡಿ ಶಿಕ್ಷಕರ ನೇಮಕಾತಿಯ ಲ್ಲಿಯೂ ಮುಸ್ಲಿಂ ಸಮುದಾಯವನ್ನು ಒಲೈಸುವ, ಅವರಿಗೆ ಮಾತ್ರ ಕೆಲಸ ಸಿಗುವಂತೆ ದಾರಿ ಮಾಡಿಕೊಡುವ ಯತ್ನ ಮತ್ತೂಮ್ಮೆ ಕಾಂಗ್ರೆಸ್ಸಿಗರ ಕುಟಿಲ ನೀತಿ ಎತ್ತಿ ತೋರಿಸುತ್ತಿದೆ ಎಂದವರು “ಎಕ್ಸ್‌’ ತಾಣದಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next