Advertisement

ಊರ್ಜಿತ್‌ ಪಟೇಲ್‌ ದಿಢೀರ್‌ ರಾಜೀನಾಮೆ

06:00 AM Dec 11, 2018 | Team Udayavani |

ಮುಂಬಯಿ: ಮಹತ್ವದ ಬೆಳವಣಿಗೆಯಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್‌ ಗವರ್ನರ್‌ ಊರ್ಜಿತ್‌ ಪಟೇಲ್‌ ಅವರು ಸೋಮವಾರ ಏಕಾಏಕಿ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣಗಳಿಂದಾಗಿ ತತ್‌ಕ್ಷಣದಿಂದಲೇ ತಮ್ಮ ಹುದ್ದೆಯನ್ನು ತ್ಯಜಿಸುತ್ತಿರುವುದಾಗಿ ಅವರು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. 

Advertisement

ಕೇಂದ್ರ ಸರಕಾರ ಮತ್ತು ಆರ್‌ಬಿಐ ನಡುವೆ ತಿಕ್ಕಾಟ ಶುರುವಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದ್ದು, ಈಗ ಆಡಳಿತ ಮತ್ತು ವಿಪಕ್ಷಗಳ ನಡುವೆ ವಾಕ್ಸಮರಕ್ಕೂ ಕಾರಣವಾಗಿದೆ. ಊರ್ಜಿತ್‌ ಅವರು 2016ರ ಸೆ. 5ರಂದು ಆರ್‌ಬಿಐಯ 24ನೇ ಗವರ್ನರ್‌ ಆಗಿ ನೇಮಕ ಗೊಂಡಿ ದ್ದರು. 3 ವರ್ಷಗಳ ಅವಧಿ ಪೂರ್ಣಗೊಳ್ಳಲು 8 ತಿಂಗಳು ಬಾಕಿ ಇರುವಾಗಲೇ ರಾಜೀನಾಮೆ ನಿರ್ಧಾರವನ್ನು ಘೋಷಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next