Advertisement

Theft ಉರ್ವ: ಮನೆಯಿಂದ 70 ಸಾವಿರ ರೂ. ಮೌಲ್ಯದ ಚಿನ್ನಾಭರಣ ಕಳವು

12:52 AM Oct 08, 2023 | Team Udayavani |

ಮಂಗಳೂರು: ಉರ್ವ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ವಾಸವಿರುವ ಬ್ಯಾಂಕ್‌ ಉದ್ಯೋಗಿ ಕನಕ ಸುರೇಶ್‌ ರೆಡ್ಡಿ ಅವರ ಮನೆಯಿಂದ ಚಿನ್ನಾಭರಣ ಹಾಗೂ ನಗದು ಕಳವಾಗಿದೆ.

Advertisement

ಕನಕ ಸುರೇಶ್‌ ರೆಡ್ಡಿ ಶುಕ್ರವಾರ ಬೆಳಗ್ಗೆ ಬ್ಯಾಂಕ್‌ಗೆ ಹೋಗಿದ್ದು, ಸಂಜೆ 6 ಗಂಟೆಗೆ ಮನೆಗೆ ಮರಳಿದಾಗ ಕಳವು ನಡೆದಿರುವುದು ತಿಳಿದು ಬಂದಿದೆ.

ಕಳ್ಳರು ಮನೆಗೆ ನುಗ್ಗಿ ಕಪಾಟಿನ ಸೇಫ್ ಲಾಕರ್‌ನಲ್ಲಿಟ್ಟಿದ್ದ ಒಟ್ಟು ಸುಮಾರು 70,000 ರೂ. ಮೌಲ್ಯದ ಚಿನ್ನದ ಎರಡು ಉಂಗುರಗಳು ಹಾಗೂ 4,000 ರೂ.ಗಳನ್ನು ಕಳವು ಮಾಡಿದ್ದಾರೆ ಎಂದು ದೂರು ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next