Advertisement

ಗಡಿಕೇಶ್ವಾರ ರಾಜಕೀಯಕ್ಕೆ ಬಳಕೆ: ಬಾಲರಾಜ ಗುತ್ತೇದಾರ

09:40 AM Oct 14, 2021 | Team Udayavani |

ಸೇಡಂ: ನಿರಂತರ ಭೂಕಂಪದಿಂದ ಊರು ತೊರೆಯಲು ಮುಂದಾಗಿರುವ ಗಡಿಕೇಶ್ವಾರ ಗ್ರಾಮದ ಜನರನ್ನು ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷದ ಮುಖಂಡರು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಳಸುತ್ತಿದ್ದಾರೆ ಎಂದು ಜೆಡಿಎಸ್‌ ಮುಖಂಡ ಬಾಲರಾಜ ಗುತ್ತೇದಾರ ಆರೋಪಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಡಿಕೇಶ್ವಾರ ಜನರ ಸಮಸ್ಯೆ ಪರಿಹರಿಸಲು ರಾಷ್ಟ್ರ ಅಥವಾ ಅಂತಾರಾಷ್ಟ್ರೀಯ ಮಟ್ಟದ ತನಿಖಾ ತಂಡ ಕರೆಸಿ, ಭೂಕಂಪದ ನೈಜತೆ ಅರಿತು ಜನರಲ್ಲಿರುವ ಭಯವನ್ನು ಹೋಗಲಾಡಿಸುವ ಕೆಲಸ ಮಾಡಬೇಕಾದ ರಾಜ್ಯದ ಬಿಜೆಪಿ ಸರ್ಕಾರ ಕಾಲಹರಣ ಮಾಡುತ್ತಿದೆ. ಇನ್ನೊಂದೆಡೆ ಆಡಳಿತ ಪಕ್ಷದ ಕಾರ್ಯವೈಖರಿ ಖಂಡಿಸಬೇಕಾದ ಕಾಂಗ್ರೆಸ್‌ ಸಹ ಸುಮ್ಮನಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈಗಾಗಲೇ ಗಡಿಕೇಶ್ವಾರ ಗ್ರಾಮದ ಶೇ. 80ರಷ್ಟು ಜನರು ತಮ್ಮ ಗ್ರಾಮ ತೊರೆದಿದ್ದಾರೆ. ಹೊಲ, ಗದ್ದೆ ಹಾಗೂ ಸಂಬಂಧಿಕರ ಮನೆಗಳಲ್ಲಿ ಆಶ್ರಯ ಪಡೆದಿದ್ದಾರೆ. ಜನರ ಮುಗ್ಧತೆ ದುರುಪಯೋಗ ಮಾಡಿಕೊಂಡು ಬಿಜೆಪಿ, ಕಾಂಗ್ರೆಸ್‌ ಮುಖಂಡರು ಗ್ರಾಮಕ್ಕೆ ತೆರಳಿ ರಾಜಕೀಯ ಭಾಷಣ ಮಾಡುತ್ತಿದ್ದಾರೆ ಎಂದರು.

ಜೆಡಿಎಸ್‌ ತಾಲೂಕು ಅಧ್ಯಕ್ಷ ಎಕ್ಬಾಲಖಾನ್‌, ಮಾಜಿ ಅಧ್ಯಕ್ಷ ಜಗನ್ನಾಥರೆಡ್ಡಿ ಗೋಟೂರ, ಶಿವಪುತ್ರಪ್ಪ ಮೋಘಾ, ರವಿ ಸಾತನೂರ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next