Advertisement

ಯೋಜನೆ ಸದುಪಯೋಗಪಡಿಸಿಕೊಳ್ಳಿ

07:24 AM Feb 11, 2019 | |

ಮೈಸೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಹಿಳೆಯರ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಸದುಪಯೋ ಗಪಡಿಸಿಕೊಂಡು ಮುಂದೆ ಬರುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಹೇಳಿದರು.

Advertisement

ಮಹಾ ನಗರಪಾಲಿಕೆವತಿಯಿಂದ ಪಂ.ದೀನದಯಾಳ್‌ ಅಂತ್ಯೋದಯ -ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಅನುಷ್ಠಾನಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಪುರಭವನದಲ್ಲಿ ಏರ್ಪಡಿಸಿದ್ದ ಡೇ-ನಲ್ಮ್ ಯೋಜನೆಯಡಿ ಶಹರಿ ಸಮೃದ್ಧಿ ಉತ್ಸವ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿಶ್ವವೇ ಮೆಚ್ಚುವಂಥಾ ಸಾಧನೆ: ಮಹಿಳೆ ಯಾಗಿ ಇನ್ಫೋಸಿಸ್‌ ಪ್ರತಿಷ್ಠಾನದ ಅಧ್ಯಕ್ಷೆ ಡಾ.ಸುಧಾಮೂರ್ತಿ ಅವರು ಎಂಥಾ ಸಾಧನೆ ಮಾಡಿದ್ದಾರೆ. ತಮ್ಮ ಪತಿ ನಾರಾಯಣ ಮೂರ್ತಿ ಅವರೊಡನೆ 10 ಸಾವಿರ ಬಂಡವಾಳ ಹೂಡಿಕೆ ಮಾಡಿ ವಿಶ್ವವೇ ಮೆಚ್ಚುವಂಥಾ ಸಾಧನೆ ಮಾಡಿ ದ್ದಾರೆ. ನಿಮ್ಮಲ್ಲೂ ಇಂಥಾ ಶಕ್ತಿ ಇದೆ ಎನ್ನುವುದನ್ನು ಅರಿಯಬೇಕು. ಸ್ವಯಂ ಉದ್ಯೋಗವನ್ನು ಆರಂಭಿಸಿ ಮಹಿಳೆಯರು ಉದ್ಯಮಿಗಳಾಗಬೇಕು. ಸ್ವಯಂ ಉದ್ಯೋಗ ಹೆಚ್ಚಾದಷ್ಟು ನಿರುದ್ಯೋಗ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ಹೇಳಿದರು.

ಅಭಿವೃದ್ಧಿಗೆ ಮಹತ್ವರ ಕೊಡುಗೆ: ಎಸ್‌.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭ ಮಹಿಳಾ ಸ್ವ ಸಹಾಯ ಸಂಘಗಳ ಅಭಿವೃದ್ಧಿಗೆ ಮಹತ್ವರ ಕೊಡುಗೆ ನೀಡಿದ್ದಾರೆ. ಅವರ ಪ್ರೋತ್ಸಾಹದಿಂದ ಸ್ವ ಸಹಾಯ ಸಂಘಗಳು ಉತ್ತಮ ಸ್ಥಿತಿಯಲ್ಲಿವೆ. ಸ್ತ್ರೀ ಶಕ್ತಿ ಮತ್ತು ಸ್ವ ಸಹಾಯ ಸಂಘವನ್ನೇ ತಾಳಪಾಯವಾಗಿಸಿಕೊಂಡು ಮಹಿಳೆಯರು ಸ್ವಯಂ ಉದ್ಯೋಗ ಆರಂಭಿಸಬೇಕು. ಉದ್ಯಮಿಗಳಾಗಿ ನಿರುದ್ಯೋಗ ಸಮಸ್ಯೆ ದೂರ ಮಾಡಬೇಕು.ಆಧಾರ್‌, ಮತದಾರರ ಗುರುತಿನ ಚೀಟಿ, ಪಡಿತರ ಚೀಟಿಗಳು ಹಣಕ್ಕಿಂತ ಮುಖ್ಯವಾದವು ಇವುಗಳನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಮಹಿಳೆಯರ ಅಭಿವೃದ್ಧಿಗೆ ಕಾರ್ಯಕ್ರಮ: ಸಂಸದ ಪ್ರತಾಪ್‌ಸಿಂಹ ಮಾತನಾಡಿ, ಮಹಿಳೆಯರ ಅಭಿವೃದ್ಧಿಗೆ ನಗರ ಪಾಲಿಕೆಯಲ್ಲಿ ಹಲವು ಕಾರ್ಯಕ್ರಮಗಳಿದ್ದು, ಅವುಗಳ ಸದುಪಯೋಗಪಡೆದುಕೊಳ್ಳ ಬೇಕು. ಈ ಕಾರ್ಯಕ್ರಮಗಳಿಗೆ ಕೇಂದ್ರದಿಂ ದಲೂ ಅನುದಾನ ಬರುತ್ತದೆ ಎಂದರು.

Advertisement

ಅಡುಗೆ ಅನಿಲವಿರುವಂತೆ ಕ್ರಮ: ನಿವೇಶನ ರಹಿತರು, ಬಡವರಿಗೆ ಮನೆ ನಿರ್ಮಿಸಿಕೊಡುವ ಮೂಲಕ ಸ್ವಂತ ಸೂರು ಕಲ್ಪಿಸಲು ಕೇಂದ್ರ ಸರ್ಕಾರ ಸಿದ್ಧವಿದೆ.ಇದಕ್ಕೆ ರಾಜ್ಯ ಸರ್ಕಾರ ಭೂಮಿ ನೀಡಬೇಕಿದೆ. ಏಪ್ರಿಲ್‌ 1 ರೊಳಗೆ ಎಲ್ಲಾ ಭಾಗಗಲ್ಲಿ ಅಡುಗೆ ಅನಿಲ ಇರುವಂತೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಮೇಯರ್‌ ಪುಷ್ಪಲತಾ ಜಗನ್ನಾಥ್‌, ಉಪ ಮೇಯರ್‌ ಶಫೀ ಅಹಮದ್‌, ಪಾಲಿಕೆ ಸದಸ್ಯರಾದ ಮ.ವಿ.ರಾಮ ಪ್ರಸಾ ದ್‌, ಶಾಂತಕುಮಾರಿ, ಮಾಜಿ ಮೇಯರ್‌ ಶ್ರೀಕಂಠಯ್ಯ, ಪಾಲಿಕೆ ಆಯುಕ್ತ ಕೆ.ಎಚ್.ಜಗದೀಶ್‌ ಮುಂತಾದವರು ಹಾಜರಿದ್ದರು.

ಉತ್ಪನಗಳ ಮಾರಾಟ: ಶಹರಿ ಸಮೃದ್ಧಿ ಉತ್ಸವದಲ್ಲಿ ಸ್ವ-ಸಹಾಯ ಗುಂಪುಗಳು, ಪ್ರದೇಶ ಮಟ್ಟದ ಒಕ್ಕೂಟಗಳು ಮತ್ತು ನಗರ ಮಟ್ಟದ ಒಕ್ಕೂಟದ ಸದಸ್ಯರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು. ಪುರಭವನದ ಆವರಣದಲ್ಲಿ ಮಹಿಳಾ ಸ್ವ ಸಹಾಯ ಸಂಘಗಳು ತಯಾರಿಸಿ ಉತ್ಪನಗಳ ಮಾರಾಟ ಮತ್ತು ಪ್ರದರ್ಶನ ನಡೆಯಿತು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಸ್ತ್ರೀ ಶಕ್ತಿ ಮತ್ತು ಮಹಿಳಾ ಸ್ವ ಸಹಾಯ ಸಂಘಗಳ ಸದಸ್ಯರು,ನಗರ ಪಾಲಿಕೆಯ ಕೇಂದ್ರ ಕಚೇರಿಯಿಂದ ಪುರಭವನ ಆವರಣದವರೆಗೆ ಜಾಥಾ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next