Advertisement

ಉಸ್ಮಾನ್‌ ಕೊಲೆ ಪ್ರಕರಣ : ಆರೋಪಿ ಸಹೋದರಿಗೆ ಪೊಲೀಸ್‌ ಕಸ್ಟಡಿ

04:50 PM Jul 18, 2023 | Team Udayavani |

ಅರಂತೋಡು : ಕೊಡಗು ಜಿಲ್ಲೆಯ ಚೆಂಬು ಗ್ರಾಮದ ಕುದ್ರೆಪಾಯ ಎಂಬಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿ ಸಹೋದರರಿಂದ ಕೊಲೆಯಾದ ಉಸ್ಮಾನ್‌ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಆರೋಪಿ ಸಹೋದರರನ್ನು ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿದೆ.

Advertisement

ಉಸ್ಮಾನ್‌ರ ಸಹೋದರರಾದ ರಫೀಕ್‌ ಮತ್ತು ಸತ್ತಾರ್‌ ಆಸ್ತಿ ವಿವಾದಕ್ಕೆ ಸಂಬಂಧಿಸಿ ಅಣ್ಣ ಉಸ್ಮಾನ್‌ರನ್ನು ಚೂರಿಯಿಂದ ಇರಿದು ಜು.14ರಂದು ಕೊಲೆ ಮಾಡಿದ್ದರು.

ಬಳಿಕ ಅವರು ರಿಕ್ಷಾದಲ್ಲಿ ಅರಂತೋಡುವರೆಗೆ ಬಂದು ಮತ್ತೂಂದು ರಿಕ್ಷಾದಲ್ಲಿ ಸುಳ್ಯಕ್ಕೆ ಬಂದು ಅಲ್ಲಿಂದ ಕೇರಳ ಕಡೆಗೆ ಪರಾರಿಯಾಗಿದ್ದರು.

ಅವರನ್ನು ಕೊಡಗು ಪೊಲೀಸರು ಜು.15 ರಂದು ರಾತ್ರಿ ಕೇರಳದಲ್ಲಿ ಬಂಧಿಸಿ, ಕರೆತಂದು ಮಡಿಕೇರಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next