Advertisement

ಮುಂದಿನ ದಿನಗಳಲ್ಲಿ ಕೋವಿಡ್ ಪರಿಸ್ಥಿತಿಯನ್ನು ಯಾರಿಂದಲೂ ಊಹಿಸಲು ಸಾಧ್ಯವಿಲ್ಲ : ಯು ಟಿ ಖಾದರ್

03:21 PM May 04, 2021 | Team Udayavani |

ಮಂಗಳೂರು : ಮುಂದಿನ ದಿನಗಳಲ್ಲಿ ಕೋವಿಡ್ ಪರಿಸ್ಥಿತಿಯನ್ನು ಯಾರಿಂದಲೂ ಊಹಿಸಲು ಸಾಧ್ಯವಿಲ್ಲ. ಆಕ್ಸಿಜನ್ ಬಗ್ಗೆ ರಾಜ್ಯ ಸರ್ಕಾರ, ಪ್ರತಿ ಜಿಲ್ಲಾಡಳಿತ ವೈಟ್ ಪೇಪರ್ ಬಿಡುಗಡೆಗೊಳಿಸಬೇಕು. ರಾಜ್ಯಕ್ಕೆ ಆಕ್ಸಿಜನ್ ಬೇಡಿಕೆ ಎಷ್ಟಿದೆ, ಪೂರೈಕೆ ಎಷ್ಟಾಗುತ್ತಿದೆ ಎಂಬ ಸ್ಪಷ್ಟವಾದ ಮಾಹಿತಿ ತಿಳಿಸಬೇಕು. ಏನು ಸಮಸ್ಯೆಯಿಲ್ಲ ಎಂದು ಸರ್ಕಾರ ಈ ಹಿಂದೆ ಹೇಳಿತ್ತು, ಹಾಗಾದ್ರೆ ಚಾಮರಾಜನಗರದ ದುರಂತಕ್ಕೆ ಯಾರು ಹೊಣೆ ಸರ್ಕಾರ ಉತ್ತರ ಕೊಡಬೇಕು ಎಂದು ಶಾಸಕ ಯು.ಟಿ ಖಾದರ್ ಪ್ರಶ್ನೆ ಮಾಡಿದ್ದಾರೆ.

Advertisement

ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು,  ದಕ್ಷಿಣಕನ್ನಡ ಜಿಲ್ಲೆಗೆ 80% ಆಕ್ಸಿಜನ್ ಜಿಂದಾಲ್ ನಿಂದ ಬರ್ತಿದೆ. 20% ಕೇರಳದ ಪಾಲ್ಗಾಟ್ ನಿಂದ ಬರುತ್ತಿದೆ. ಕೇರಳದಲ್ಲಿ ಕೋವಿಡ್ ಕೇಸ್ ಹೆಚ್ಚಾದ್ರೆ ಆಕ್ಸಿಜನ್ ಸಪ್ಲೈ ನಿಲ್ಲುವ ಸಾಧ್ಯತೆ ಇದೆ. ಇದಕ್ಕಾಗಿ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕು. ಜಿಂದಾಲ್ ನಿಂದ ಮಹಾರಾಷ್ಟ್ರ, ಆಂಧ್ರಕ್ಕೆ ಲಿಕ್ವಿಡ್ ಆಕ್ಸಿಜನ್ ಕಳುಹಿಸಲಾಗುತ್ತಿದೆ. ನಮ್ಮ ರಾಜ್ಯಕ್ಕೆ ಮೊದಲ ಆದ್ಯತೆ ಕೊಡಬೇಕು ಎಂದರು.

ತಮಿಳುನಾಡಿನ ಸಂಸದರು ಕೇಂದ್ರಕ್ಕೆ ಒತ್ತಡ ಹಾಕಿ ಹೆಚ್ಚುವರಿ ಆಕ್ಸಿಜನ್ ಪಡೆಯುತ್ತಿದ್ದಾರೆ. ನಮ್ಮ ಸಂಸದರು, ಸರ್ಕಾರಕ್ಕೆ ಯಾಕೆ ಇದು ಸಾಧ್ಯ ಆಗುತ್ತಿಲ್ಲ. ಮೆಡಿಕಲ್ ಎಮರ್ಜೆನ್ಸಿ ಸ್ಟೇಟ್ ಎಂದು ಡಿಕ್ಲೇರ್ ಮಾಡಬೇಕು. ರಾಜ್ಯಕ್ಕೆ ಬೇಕಾದ ಎಲ್ಲ ಮೆಡಿಕಲ್ ಸೌಲಭ್ಯ ಪಡೆದುಕೊಳ್ಳಬೇಕು. ಮಂತ್ರಿಗಳು, ಮುಖ್ಯಮಂತ್ರಿಗಳ ನಡುವೆ ಸಮನ್ವಯತೆ ಇರಬೇಕು. ದಿನಕ್ಕೊಂದು ಹೇಳಿಕೆ ಕೊಟ್ರೆ ಜನ ಸಾಮಾನ್ಯರು ಗೊಂದಲಕ್ಕೆ ಒಳಗಾಗುತ್ತಾರೆ ಎಂದು ಸರ್ಕಾರದ ವಿರುದ್ಧ ಮಂಗಳೂರಿನಲ್ಲಿ ಮಾಜಿ ಆರೋಗ್ಯ ಸಚಿವ ಯು.ಟಿ ಖಾದರ್ ಆಕ್ರೋಶ ಹೊರ ಹಾಕಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next