Advertisement

ಉಳ್ಳಾಲ:ಸಚಿವ ಖಾದರ್‌ ಆಪ್ತನಿಗೆ ಸೋಲು; ಕಲ್ಲು ತೂರಾಟ 

11:06 AM Sep 03, 2018 | Team Udayavani |

ಉಳ್ಳಾಲ: ನಗರ ಸಭೆ ಚುನಾವಣಾ ಫ‌ಲಿತಾಂಶ ಪ್ರಕಟವಾಗಿದ್ದು , ವಿಜೇತ ಪಕ್ಷೇತರ ಅಭ್ಯರ್ಥಿ ಸೇರಿ ಹಲವರ ಅಂಗಡಿಗಳ  ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಸೋಮವಾರ ನಡೆದಿದೆ. 

Advertisement

19 ನೇ ವಾರ್ಡ್‌ನಲ್ಲಿ ಸಚಿವ ಯು.ಟಿ.ಖಾದರ್‌ ಅವರ ಆಪ್ತ, ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ  ಉಸ್ಮಾನ್‌ ಕಲ್ಲಾಪು ಅವರು ಪಕ್ಷೇತರ ಅಭ್ಯರ್ಥಿ ಮುಶ್ತಾಕ್‌ ಎದುರು ಸೋಲು ಅನುಭವಿಸಿದ್ದಾರೆ. 

ಸೋಲಿನ ಬಳಿಕ ಕಲ್ಲಾಪುವಿನಲ್ಲಿ ಅಹಿತಕರ ಘಟನೆ ನಡೆದಿದ್ದು, ಕಿಡಿಕೇಡಿಗಳು ಅಂಗಡಿ ಮುಂಗಟ್ಟುಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ಚಾರ್ಜ್‌ ನಡೆಸಿದ್ದಾರೆ. 

ಸ್ಥಳದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next