Advertisement

ಶಾಸಕ ಯು.ಟಿ.ಖಾದರ್ ಸಂಚರಿಸುತ್ತಿದ್ದ ಕಾರನ್ನು ಬೈಕಿನಲ್ಲಿ ಹಿಂಬಾಲಿಸಿದ ಅಪರಿಚಿತರು

10:20 PM Dec 23, 2020 | sudhir |

ಮಂಗಳೂರು: ಮಾಜಿ ಸಚಿವ, ಹಾಲಿ ಶಾಸಕ ಯು.ಟಿ. ಖಾದರ್‌ ಅವರಿದ್ದ ಕಾರನ್ನು ಇಬ್ಬರು ದುಷ್ಕರ್ಮಿಗಳು ಬೆನ್ನತ್ತಿ ಬಂದು ಅನಂತರ ತಪ್ಪಿಸಿಕೊಂಡಿರುವ ಘಟನೆ ಬುಧವಾರ ನಡೆದಿದೆ.

Advertisement

ಖಾದರ್‌ ಅವರು ಬುಧವಾರ ರಾತ್ರಿ 7.45ರ ಸುಮಾರಿಗೆ ದೇರಳಕಟ್ಟೆಯಲ್ಲಿ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ತೆರಳಲು ವಿಮಾನ ನಿಲ್ದಾಣದತ್ತ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ದೇರಳಕಟ್ಟೆ ಬಳಿ ಬೈಕೊಂದು ಎರಡು ಬಾರಿ ಅವರ ಕಾರಿನ ಸಮೀಪ ಅನುಮಾನಾಸ್ಪದ ರೀತಿಯಲ್ಲಿ ಹಾದು ಹೋಗಿತ್ತು ಇದನ್ನು ಗಮನಿಸಿದ ಬೆಂಗಾವಲು ಪಡೆಯ ಅಧಿಕಾರಿಗಳು ಬೈಕ್ ಸವಾರರನ್ನು ನಂತೂರು ಬಳಿ ನಿಲ್ಲಿಸುವಷ್ಟರಲ್ಲಿ ಅವರು ಪರಾರಿಯಾಗಿದ್ದರು.

ಬೈಕ್‌ನ ಸುಳಿವು ಪೊಲೀಸರಿಗೆ ಲಭ್ಯವಾಗಿದೆ ಎನ್ನಲಾಗಿದೆ. ಈ ಬಗ್ಗೆ ದೂರು ದಾಖಲಾಗಿಲ್ಲ. ಆದ್ದರಿಂದ ಪೊಲೀಸರ ತನಿಖೆಯಿಂದ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಾಗಿದೆ.

ಭದ್ರತೆಯ ಕಾರಣ ಸಮಸ್ಯೆ ಆಗಿಲ್ಲ :
ಘಟನೆಯ ಬಗ್ಗೆ “ಉದಯವಾಣಿ’ಗೆ ಪ್ರತಿಕ್ರಿಯಿಸಿದ ಖಾದರ್‌ ಅವರು, “ನನ್ನ ಕಾರನ್ನು ಬೈಕ್‌ನಲ್ಲಿ ಹಿಂಬಾಲಿಸುತ್ತಿದ್ದ ವಿಚಾರ ನನ್ನ ಗಮನಕ್ಕೆ ಬಂದಿರಲಿಲ್ಲ. ಆದರೆ ಬೆಂಗಾವಲು ಪಡೆಯ ಅಧಿಕಾರಿಗಳು ಗಮನಿಸಿದ್ದರು. ನಂತೂರು ಬಳಿ ಬರುವಾಗ ಬೈಕನ್ನು ತಡೆದು ವಿಚಾರಿಸಲು ಮುಂದಾಗಿದ್ದು, ಅಷ್ಟರಲ್ಲಿ ಅವರು ತಪ್ಪಿಸಿಕೊಂಡರು ಎಂದು ಎಸ್ಕಾರ್ಟ್‌ ಸಿಬಂದಿ ತಿಳಿಸಿದ್ದಾರೆ. ಆಗಲೇ ಈ ವಿಚಾರ ನನ್ನ ಗಮನಕ್ಕೆ ಬಂದಿರುವುದು. ನನಗೆ ಜೀವ ಬೆದರಿಕೆ ಇದೆ ಎಂಬ ಕಾರಣದಿಂದಲೇ ಮುಖ್ಯಮಂತ್ರಿಗಳು ಹಾಗೂ ಗೃಹಸಚಿವರು ಬೆಂಗಾವಲು ವ್ಯವಸ್ಥೆ ಮಾಡಿದ್ದಾರೆ. ಹೀಗಾಗಿ, ಸದ್ಯಕ್ಕೆ ಯಾವುದೇ ಸಮಸ್ಯೆ ಆಗಲಿಲ್ಲ’ ಎಂದರು.

ಇದನ್ನೂ ಓದಿ:ಜಮ್ಮು ಕಾಶ್ಮೀರದ ಡಿಡಿಸಿ ಗೆಲುವಿನಿಂದ ಬಿಜೆಪಿ ಅಲೆ ಸಾಬೀತು : ನಳಿನ್‌ ಕುಮಾರ್‌ ಕಟೀಲ್‌

Advertisement
Advertisement

Udayavani is now on Telegram. Click here to join our channel and stay updated with the latest news.

Next