Advertisement

ಪ್ರಾಥಮಿಕ ಶಾಲೆಗಳಲ್ಲಿ “ಸಂತೋಷ ಪಠ್ಯಕ್ರಮ”; ಉತ್ತರ ಪ್ರದೇಶ ಸರ್ಕಾರದ ವಿಶೇಷ ಕ್ರಮ

08:32 PM Dec 19, 2021 | Team Udayavani |

ಲಕ್ನೋ: ಉತ್ತರ ಪ್ರದೇಶದ ಪ್ರಾಥಮಿಕ ಶಾಲೆಗಳಲ್ಲಿ ಸಂತೋಷದ ಬಗ್ಗೆ ಪಾಠ ಮುಂದಿನ ಶೈಕ್ಷಣಿಕ ವರ್ಷದಿಂದ ಶುರುವಾಗಲಿದೆ.

Advertisement

ರಾಜ್ಯದ ಭೌಗೋಳಿಕ ಮತ್ತು ಸಾಂಸ್ಕೃತಿಕ ಸ್ಥಿತಿಗತಿಯನ್ನು ಗಮನದಲ್ಲಿಟ್ಟುಕೊಂಡು, ವಿದ್ಯಾರ್ಥಿಗಳಿಗೆ ನಿಸರ್ಗ, ಸಮಾಜ ಮತ್ತು ದೇಶದತ್ತ ಇನ್ನಷ್ಟು ಅರಿವು ಮೂಡಿಸುವ ನಿಟ್ಟಿನಲ್ಲಿ ಸಂತೋಷ ಪಠ್ಯಕ್ರಮ ಜಾರಿಗೆ ತರಲಾಗುತ್ತಿದೆ ಎಂದು ಪಠ್ಯಕ್ರಮದ ಉಸ್ತುವಾರಿ ಸೌರಭ್‌ ಮಾಳವೀಯ ತಿಳಿಸಿದ್ದಾರೆ.

ಇದರಲ್ಲಿ ವಿದ್ಯಾರ್ಥಿಗಳು ತಮ್ಮೊಂದಿಗೆ, ಕುಟುಂಬದೊಂದಿಗೆ, ಸ್ನೇಹಿತರೊಂದಿಗೆ ಅನ್ಯೋನ್ಯತೆಯಿಂದ ಬದುಕಲು ಹಾಗೂ ಸಮಾಜದಲ್ಲಿ ತಮ್ಮ ಜವಾಬ್ದಾರಿಯನ್ನು ಅರಿತುಕೊಳ್ಳಲು ಸಹಕಾರಿಯಾಗಲಿದೆ.

ಇದನ್ನೂ ಓದಿ:145 ಕ್ಕೆ ಏರಿದ ಭಾರತದ ಒಮಿಕ್ರಾನ್ ಪ್ರಕರಣಗಳು

1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಈ ಪಠ್ಯಕ್ರಮವಿರಲಿದೆ. 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗಾಗಿ 5 ಪುಸ್ತಕ ಗಳನ್ನು ತಯಾರಿಸಲಾಗುತ್ತಿದೆ.

Advertisement

ಮೊದಲ ಹಂತದಲ್ಲಿ ಈ ಯೋಜನೆಯನ್ನು 15 ಜಿಲ್ಲೆಗಳ 150 ಶಾಲೆಗಳಲ್ಲಿ ಮಾತ್ರವೇ ಜಾರಿಗೆ ತರಲಾಗುವುದು ಎಂದು ಅವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next