Advertisement

UP: ಅಪ್ರಾಪ್ತ ಬಾಲಕರಿಗೆ ಮೂತ್ರ ಕುಡಿಸಿ, ಗುದದ್ವಾರಕ್ಕೆ ಮೆಣಸಿನ ಕಾಯಿ ಹಾಕಿ ಚಿತ್ರ ಹಿಂಸೆ

02:40 PM Aug 06, 2023 | Team Udayavani |

ಲಕ್ನೋ: ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಇಬ್ಬರು ಅಪ್ರಾಪ್ತ ಬಾಲಕರನ್ನು ಸೆರೆಹಿಡಿದು ಹಿಂಸಿಸಿರುವ ಘಟನೆ ಉತ್ತರ ಪ್ರದೇಶದ ಸಿದ್ಧಾರ್ಥನಗರದಲ್ಲಿ ನಡೆದಿದೆ.

Advertisement

10 -15 ವರ್ಷದ ಅಪ್ರಾಪ್ತ ಬಾಲಕರು ಕಳ್ಳತನ ಮಾಡಿದ್ದಾರೆಂದು ಸ್ಥಳೀಯ ಗೂಂಡಾಗಳು ಬಾಲಕರನ್ನು ಸೆರೆ ಹಿಡಿದಿದ್ದಾರೆ.

ಹಣ ದೋಚಿದ್ದಾರೆ ಎಂದು ಆರೋಪಿಸಿ ಗೂಂಡಾಗಳು ಹುಡುಗರನ್ನು ಹಿಡಿದು ಕಟ್ಟಿ ಹಾಕಿದ್ದಾರೆ. ಆ ಬಳಿಕ ಹಸಿ ಮೆಣಸಿನ ಕಾಯಿಯನ್ನು ಕಚ್ಚಿ ತಿನ್ನುವಂತೆ ಬಲವಂತ ಮಾಡಿದ್ದಾರೆ. ಕಚ್ಚಿ ತಿಂದ ಬಳಿಕ ಅದನ್ನು ಮೂತ್ರದೊಂದಿಗೆ ಸೇವಿಸಿಬೇಕೆಂದು ಹಿಂಸೆ ನೀಡಲು ಆರಂಭಿಸಿದ್ದಾರೆ. ಬಲವಂತವಾಗಿ ಇಬ್ಬರು ಬಾಲಕರಿಗೆ ಬಾಟಲಿಯಲ್ಲಿ ಮೂತ್ರ ಕುಡಿಸಿದ್ದಾರೆ. ಇದಾದ ಬಳಿಕ ಅವರನ್ನು ಕಟ್ಟಿ ಹಾಕಿ ಬಾಲಕರ ಅಂಗಿಯನ್ನು ಜಾರಿಸಿ ಖಾಸಗಿ ಅಂಗಕ್ಕೆ ಮೆಣಸಿನ ಕಾಯಿಯನ್ನು ಉಜ್ಜಿದ್ದಾರೆ. ಬಾಲಕರು ಉರಿ ಹಾಗೂ ನೋವು ತಾಳಲಾರದೆ ಅಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಇದಾದ ಬಳಿಕ ಯಾವುದೋ ಒಂದು ಔಷಧವನ್ನು ಚುಚ್ಚು ಮದ್ದಿನ ಹಾಗೆ ಇಂಜೆಕ್ಷನ್‌ ರೀತಿ ಬಾಲಕರಿಗೆ ಚುಚ್ಚಿದ್ದಾರೆ.

ಈ ಘಟನೆ ಆಗಸ್ಟ್‌ 4 ರಂದು ಜಿಲ್ಲೆಯ ಪತ್ರಾ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಕೊಂಕಟಿ ಚೌರಾಹಾ ಬಳಿಯ ಅರ್ಶನ್ ಚಿಕನ್ ಶಾಪ್ ನಲ್ಲಿ ನಡೆದಿದೆ ಎನ್ನಲಾಗಿದೆ.

Advertisement

ಸಾಮಾಜಿಕ ಜಾಲತಾಣದಲ್ಲಿ ಈ ಘಟನೆಯ ವಿಡಿಯೋ ವೈರಲ್‌ ಆಗಿದ್ದು, ಸಿದ್ಧಾರ್ಥನಗರದ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ದಾಖಲಾದ ದೂರಿನ ಆಧಾರದ ಮೇಲೆ ಸೂಕ್ತ ಆರೋಪಗಳನ್ನು ದಾಖಲಿಸಲಾಗಿದೆ.

ಘಟನೆಯಲ್ಲಿ ಭಾಗಿಯಾಗಿರುವ ಆರು ಮಂದಿ ಆರೋಪಿಗಳನ್ನು ಪೊಲೀಸರು ಗುರುತಿಸಿ ಬಂಧಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ವರದಿ ತಿಳಿಸಿದೆ.

 

 

Advertisement

Udayavani is now on Telegram. Click here to join our channel and stay updated with the latest news.

Next