Advertisement

ಆಕ್ಸಿಜನ್ ಕೊರತೆಯಿಂದ ಪ್ರಾಣ ಬಿಟ್ಟ ನವಜಾತ ಅವಳಿ ಶಿಶುಗಳು

09:34 AM Apr 25, 2021 | Team Udayavani |

ಲಖನೌ (ಉತ್ತರಪ್ರದೇಶ) : ಆಸ್ಪತ್ರೆಯೊಂದರಲ್ಲಿ ಆಕ್ಸಿಜನ್ ಇಲ್ಲದ ಕಾರಣ​ ಇಬ್ಬರು ನವಜಾತ ಶಿಶುಗಳು ಮೃತಪಟ್ಟ ಘಟನೆ ಶನಿವಾರ ರಾತ್ರಿ ಉತ್ತರಪ್ರದೇಶದ ಬಾರ್ಬಂಕಿಯಲ್ಲಿರುವ ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ.

Advertisement

ಇಲ್ಲಿನ ಬಾರ್ಬಂಕಿಯಲ್ಲಿರುವ ಎರಡು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಇದೆ ಎಂದು ಸರ್ಕಾರಕ್ಕೆ ಮಾಹಿತಿ ನೀಡಲಾಗಿತ್ತು. ಆದರೂ ಕೂಡ ವೈದ್ಯಕೀಯ ಆಮ್ಲಜನಕವನ್ನು ಪೂರೈಕೆ ಮಾಡಿರಲಿಲ್ಲ. ಈ ಕಾರಣದಿಂದ ಶನಿವಾರ ರಾತ್ರಿ ಅವಳಿ ಮಕ್ಕಳು ಸಾವನ್ನಪ್ಪಿವೆ.

ಶನಿವಾರ ಹುಟ್ಟಿದ ಆ ಅವಳಿ ಮಕ್ಕಳಿಗೆ ಆಕ್ಸಿಜನ್ ಅವಶ್ಯಕತೆ ಇದೆ ಎಂದು ವೈದ್ಯರು ತಿಳಿಸಿದ್ದರು. ಆದ್ರೆ ಆಸ್ಪತ್ರೆಯಲ್ಲಿ ಶಿಶುಗಳಿಗೆ ನೀಡಲು ಆಮ್ಲಜನಕ ಇರಲಿಲ್ಲ. ಈ ಕಾರಣದಿಂದ ಮಕ್ಕಳು ಮೃತಪಟ್ಟಿವೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ.

ಇತ್ತೀಚೆಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಮಾತನಾಡಿದ್ದು, ನಮ್ಮಲ್ಲಿ ಆಮ್ಲಜನಕದ ಕೊರತೆಯಿಲ್ಲ. ಕಾಳಸಂತೆಯಲ್ಲಿ ಆಕ್ಸಿಜನ್ ಮಾರುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರೂ. ಆದ್ರೆ ಇದೀಗ ಲಖನೌ ಆಸ್ಪತ್ರೆಯಲ್ಲಿ ನಡೆದಿರುವ ಈ ಘಟನೆಯಿಂದ ಜನರು ಸರ್ಕಾರವನ್ನು ಪ್ರಶ್ನೆ ಮಾಡುವಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next