Advertisement

Uttar Pradesh: ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತ್ಯು ; 8 ಮಂದಿಗೆ ಗಾಯ

10:53 AM Apr 15, 2023 | Team Udayavani |

ಶ್ರಾವಸ್ತಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಯ ಇಕೌನಾದಲ್ಲಿ ರಾಷ್ಟ್ರೀಯ ಹೆದ್ದಾರಿ 730 ರಲ್ಲಿ ಪ್ರಯಾಣಿಸುತ್ತಿದ್ದ ಎಸ್‌ಯುವಿ ಅಪಘಾತಕ್ಕೀಡಾಗಿ ಆರು ಜನರು ಸಾವನ್ನಪ್ಪಿದ್ದು , ಎಂಟು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ.

Advertisement

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆಯ ಸಮಯದಲ್ಲಿ ಕಾರಿನಲ್ಲಿ 14 ಜನರಿದ್ದರು ಮತ್ತು ಅವರಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಶ್ರಾವಸ್ತಿ ಪೊಲೀಸ್ ವರಿಷ್ಠಾಧಿಕಾರಿ ಪ್ರಾಚಿ ಸಿಂಗ್ ಹೇಳಿದ್ದಾರೆ.

ಗಾಯಗೊಂಡವರಲ್ಲಿ ಎಂಟು ಮಂದಿಯನ್ನು ಬಹ್ರೈಚ್ ಜಿಲ್ಲಾ ಆಸ್ಪತ್ರೆಗೆ ಉಲ್ಲೇಖಿಸಲಾಗಿದೆ ಎಂದು ಅವರು ಹೇಳಿದರು.

ಸಂತಾಪ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

Advertisement

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ…

Advertisement

Udayavani is now on Telegram. Click here to join our channel and stay updated with the latest news.

Next