Advertisement

ಹುಬ್ಬಳ್ಳಿ ಗಲಭೆ ಆರೋಪಿಗಳ ವಿರುದ್ಧ ಉ.ಪ್ರದೇಶ ರೀತಿಯ ಕ್ರಮ: ಸಿಎಂ ಬೊಮ್ಮಾಯಿ

03:25 PM Apr 19, 2022 | Team Udayavani |

ಶಿವಮೊಗ್ಗ: ಹುಬ್ಬಳಿಯ ಗಲಭೆಯ ಬಗ್ಗೆ ತನಿಖೆ ನಡೆಯುತ್ತಿದೆ. ಉತ್ತರ ಪ್ರದೇಶದಲ್ಲಿ ದಂಗೆಗಳಾದಾಗ ಕಠಿಣ ಕ್ರಮ ಕೈಗೊಂಡಿದ್ದರು. ಅಲ್ಲಿಯ ಪರಿಸ್ಥಿತಿ ಆಧರಿಸಿ ಕ್ರಮ ಕೈಗೊಂಡಿದ್ದರು. ಆದರೆ ನಾವು ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ಪ್ರಕರಣದಲ್ಲಿ ವಿಡಿಯೋ ಹಾಗೂ ಸಾಕ್ಷಿಗಳ ಆಧಾರದಲ್ಲಿ ತನಿಖೆ ನಡೆಯುತ್ತಿದೆ. ಗಲಭೆ ಹಿಂದೆ‌ ಯಾರಿದ್ದಾರೆ ಎಂಬುದು ತಿಳಿದು ಬರುತ್ತಿದೆ ಎಂದರು.

ಇದನ್ನೂ ಓದಿ:ಲೂಟಿ ಮಾಡಿದವರು, ಠಾಣೆಗೆ ನುಗ್ಗಿದವರು ಅಮಾಯಕರೇ: ಸಿದ್ದರಾಮಯ್ಯಗೆ ಬಿಎಸ್ ವೈ ಪ್ರಶ್ನೆ

ಹಿಂದೆ‌ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯಾದಾಗ ಕಠಿಣ ಕ್ರಮ ಕೈಗೊಂಡಿದ್ದೇವೆ. ಈ ಪ್ರಕರಣದಲ್ಲಿ ರಿಕವರಿ ಕಮಿಷನ್ ನೇಮಿಸಿದ್ದೇವೆ.  ಹಿಂದೆ‌ ಗಲಭೆ ಮಾಡಿದವರಿಗೆ ತಕ್ಕ ಪಾಠವಾಗಿದೆ. ಪ್ರಚೋದನೆ ಮಾಡಿದಾಗ ತಕ್ಕ ಪಾಠ ಕಲಿಸುವ ಕೆಲಸವಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next