Advertisement

ಚಿತ್ರದುರ್ಗಕ್ಕೆ ಆಘಾತ ನೀಡಿದ ಉತ್ತರ ಪ್ರದೇಶದ ಕಾರ್ಮಿಕರ ಲಾರಿ! ಆರು ಜನರಿಗೆ ಸೋಂಕು ದೃಢ

01:28 PM May 28, 2020 | keerthan |

ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗ ಜಿಲ್ಲೆಗೆ ಉತ್ತರ ಪ್ರದೇಶದ ಕಾರ್ಮಿಕರ ಲಾರಿಯೊಂದು ಆಘಾತ ನೀಡಿದೆ. ಹೌದು ಜಿಲ್ಲೆಯಲ್ಲಿ ಇಂದು ಹೊಸ ಆರು ಕೋವಿಡ್-19 ಪ್ರಕರಣಗಳು ದೃಢವಾಗಿದ್ದು, ಇವರೆಲ್ಲರೂ ಉತ್ತರ ಪ್ರದೇಶ ಮೂಲದ ಕಾರ್ಮಿಕರಾಗಿದ್ದಾರೆ.

Advertisement

ಈ ಕಾರ್ಮಿಕರು ಚೆನ್ನೈನಿಂದ ಉತ್ತರ ಪ್ರದೇಶಕ್ಕೆ ಹೊರಟಿದ್ದರು. ಒಂದೇ ಲಾರಿಯಲ್ಲಿ 59 ಜನರು ಹೊರಟಿದ್ದರು. ಕಳೆದ ಮೇ 15ರಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ತಡೆದು ಸಾಂಸ್ಥಿಕ ಕ್ವಾರಂಟೈನ್ ಗೆ ಕಳುಹಿಸಲಾಗಿತ್ತು. ಇವರ ಗಂಟಲು ದ್ರವ ಪರೀಕ್ಷೆ ನಡೆಸಿದ್ದು ಮೇ. 22 ರಂದು ಒಬ್ಬರಿಗೆ, ಮೇ. 26 ರಂದು 20 ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿತ್ತು. ಇಂದು ಮತ್ತೆ  ಓರ್ವ ಬಾಲಕ, ಐವರು ಯುವಕರಿಗೆ ಸೋಂಕು ತಾಗಿರುವುದು ಖಚಿತವಾಗಿದೆ.

ಇಂದಿನ ಆರು ಸೋಂಕು ಪ್ರಕರಣಗಳಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 37 ಕ್ಕೇರಿದೆ.

ರಾಜ್ಯದಲ್ಲಿಂದು ಒಟ್ಟು 75 ಹೊಸ ಸೋಂಕು ಪ್ರಕರಣಗಳು ದೃಢವಾಗಿದೆ. ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 2493ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 28 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ರಾಜ್ಯದಲ್ಲಿ ಒಟ್ಟು 809 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 47 ಮಂದಿ ಸೋಂಕಿನ ಕಾರಣದಿಂದ ಸಾವನ್ನಪ್ಪಿದರೆ, ಇಬ್ಬರು ಸೋಂಕಿತರು ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next