Advertisement

Uttara Kannada: ನಾಳೆ ಅಂಕೋಲಾಕ್ಕೆ ಸಿಎಂ ಸಿದ್ದರಾಮಯ್ಯ; ಸಂತ್ರಸ್ತರ ಭೇಟಿ

10:00 PM Jul 20, 2024 | Team Udayavani |

ಬೆಂಗಳೂರು: ಅಂಕೋಲಾ-ಶಿರೂರು ನಡುವಿನ ಹೆದ್ದಾರಿ ಕುಸಿತದಿಂದ ಸಾಕಷ್ಟು ನಷ್ಟ ಉಂಟಾಗಿದ್ದು, ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ (ಜು.21) ಭೇಟಿ ನೀಡಿ ಪರಿಶೀಲಿಸಲು ಮುಂದಾಗಿದ್ದಾರೆ.

Advertisement

ಈಗಾಗಲೇ ಸಚಿವರಾದ ಮಂಕಾಳ ವೈದ್ಯ, ಶಾಸಕ ಸತೀಶ್‌ ಸೈಲ್‌ ಸೇರಿದಂತೆ ಇನ್ನಿತರರು ಆರೈಕೆ ಕೇಂದ್ರದಲ್ಲಿರುವ ಸಂತ್ರಸ್ತರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಜತೆಗೆ ಹೆದ್ದಾರಿ ಬದಿ ಕುಸಿದ ಸ್ಥಳಕ್ಕೂ ಭೇಟಿ ನೀಡಿ ಅದರ ತೆರವು ಕಾರ್ಯಾಚರಣೆಯನ್ನು ಪರಿಶೀಲಿಸಿದ್ದಾರೆ. ಅಲ್ಲದೆ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಕೂಡ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಭಾನುವಾರ ಭೇಟಿ ನೀಡಲಿದ್ದಾರೆ.

ನಾನೇ ಭಾನುವಾರ ತೆರಳುವೆ: ಶನಿವಾರ ಬೆಂಗಳೂರಿನಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಮಳೆಯಿಂದ ರಸ್ತೆ, ಮನೆ ಬಿದ್ದಿರುವುದು ಹಾಗೂ ಬೆಳೆ ಹಾನಿಯಾಗಿರುವುದಕ್ಕೆ ಪರಿಹಾರ ಕಾರ್ಯಗಳನ್ನು ತುರ್ತಾಗಿ ಕೈಗೊಳ್ಳಬೇಕೆಂದು ಸೂಚಿಸಿದ್ದೇನೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಸೇತುವೆ ಪರಿಶೀಲಿಸಲು ಭಾನುವಾರ ನಾನೇ ತೆರಳುತ್ತೇನೆ ಎಂದಿದ್ದಾರೆ.

ಶಿರೂರಿಗೆ ವಿಜಯೇಂದ್ರ, ಅಶೋಕ್‌  ನಾಳೆ ಭೇಟಿ 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭಾನುವಾರ ಮಧ್ಯಾಹ್ನದ ವೇಳೆಗೆ ಉಲ್ವೇರ್‌ ಮತ್ತು ಶಿರೂರಿಗೆ ಭೇಟಿ ನೀಡಲಿದ್ದು, ಸಂತ್ರಸ್ತರನ್ನು ಭೇಟಿ ಮಾಡಿ ಸಾಂತ್ವನ ಹೇಳಲಿದ್ದಾರೆ. ಇತ್ತ ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ್‌, ಹಾಸನ ಜಿಲ್ಲೆ ಸಕಲೇಶಪುರ ಭಾಗಕ್ಕೆ ಭೇಟಿ ನೀಡಲಿದ್ದು, ಬಳಿಕ ಶಿರೂರಿಗೂ ಭೇಟಿ ಕೊಡಲಿದ್ದಾರೆ ಎಂದು ತಿಳಿದುಬಂದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next