Advertisement

ಕಾರವಾರ: ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಅಧಿಕಾರ ಸ್ವೀಕಾರ

03:57 PM Jul 26, 2023 | Team Udayavani |

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಗಂಗೂಬಾಯಿ ಆರ್.ಮಾನಕರ್ ಬುಧುವಾರ ಅಧಿಕಾರ ಸ್ವೀಕರಿಸಿದರು . ಪ್ರಭುಲಿಂಗ ಕವಳಿಕಟ್ಟಿ ಅವರು ಗಂಗೂಬಾಯಿಗೆ ಅಧಿಕಾರ ಹಸ್ತಾಂತರಿಸಿದರು.

Advertisement

ಅಧಿಕಾರ ಸ್ವೀಕರಿಸಿದ ಜಿಲ್ಲಾಧಿಕಾರಿ ಗಂಗೂಬಾಯಿ ಅವರು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಪರಿಸ್ಥಿತಿ ನಿಭಾಯಿಸಲು ಅಧಿಕಾರಿಗಳಿಗೆ ಸೂಚಿಸುವುದಾಗಿ ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಸಹಾಯಕ‌ ಕಮಿಷನರ್ ಆಗಿ ಕಾರ್ಯನಿರ್ವಹಿಸಿದ್ದೆ. ಜಿಲ್ಲೆಯ ಪರಿಚಯವಿದೆ.

ಕರಾವಳಿ , ಮಲೆನಾಡು, ಅರೆ ಮಲೆನಾಡು, ಬಯಲು ಪ್ರದೇಶ ಹೊಂದಿದ, ಪ್ರಾಕೃತಿಕ ಶ್ರೀಮಂತಿಕೆಯ ಜಿಲ್ಲೆಯಿದು. ಇಲ್ಲಿ ಕೆಲಸ ಮಾಡುವುದು ವಿಶಿಷ್ಟ ಅನುಭವ ಹಾಗೂ ಸವಾಲಿನ ಕೆಲಸವೂ ಹೌದು ಎಂದರು.

ನೂತನ ಜಿಲ್ಲಾಧಿಕಾರಿ ಅವರನ್ನು ಜಿಲ್ಲಾ ಮಟ್ಟದ ಅಧಿಕಾರಿಗಳು, ಕಚೇರಿ ಸಿಬ್ಬಂದಿ ಹೂಗುಚ್ಚ ನೀಡಿ ಸ್ವಾಗತಿಸಿದರು‌ . ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ಉಪಸ್ಥಿತರಿದ್ದರು .

Advertisement

Udayavani is now on Telegram. Click here to join our channel and stay updated with the latest news.

Next