Advertisement

ಉತ್ತರಾಖಂಡ ಸಿಎಂ ತ್ರಿವೇಂದ್ರ ಸಿಂಗ್‌ ರಾವತ್ ರಾಜೀನಾಮೆ

12:34 AM Mar 10, 2021 | Team Udayavani |

ಡೆಹ್ರಾಡೂನ್ : ಉತ್ತರಾಖಂಡದಲ್ಲಿ ಸಿಎಂ ತ್ರಿವೇಂದ್ರ ಸಿಂಗ್‌ ರಾವತ್‌ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ವರಿಷ್ಠರ ನಿರ್ದೇಶನದ ಮೇರೆಗೆ ಅವರು ಪದತ್ಯಾಗ ಮಾಡಿದ್ದು, ರಾಜ್ಯಪಾಲರು ಅಂಗೀಕರಿಸಿದ್ದಾರೆ.

Advertisement

ರಾಜ್ಯದಲ್ಲಿ ಪಕ್ಷದ ನಾಯಕರ ಜತೆಗೆ ಸಂಪರ್ಕ ಕಳೆದುಕೊಂಡಿರುವ ಆರೋಪ ಎದುರಿಸುತ್ತಿದ್ದ ರಾವತ್‌ ಅವರನ್ನು ವರಿಷ್ಠರು ದಿಲ್ಲಿಗೆ ಕರೆಸಿಕೊಂಡಿದ್ದರು. ಬುಧವಾರ ಬೆಳಗ್ಗೆ ಬಿಜೆಪಿ ಶಾಸಕಾಂಗ ಸಭೆ ನಡೆಯಲಿದ್ದು, ನೂತನ ಸಿಎಂ ಆಯ್ಕೆಯಾಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next