Advertisement

ಕೇದಾರ, ಬದ್ರಿನಾಥ ದೇಗುಲ ಸ್ಫೋಟಿಸುವ ಬೆದರಿಕೆ

09:41 PM Oct 16, 2022 | Team Udayavani |

ಹರಿದ್ವಾರ: ಉತ್ತರಾಖಂಡದ ಕೇದಾರನಾಥ, ಬದ್ರಿನಾಥ ಸೇರಿದಂತೆ ರಾಜ್ಯದ ದೇವಾಲಯಗಳು ಹಾಗೂ ರೈಲು ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ಬೆದರಿಕೆ ಪತ್ರದ ಹಿನ್ನೆಲೆಯಲ್ಲಿ ರಾಜ್ಯಾದ್ಯಾಂತ ಪೊಲೀಸ್‌ ಹಾಗೂ ಗುಪ್ತಚರ ಇಲಾಖೆಗಳು ಕಟ್ಟೆಚ್ಚರ ವಹಿಸಿವೆ.

Advertisement

ಹರಿದ್ವಾರ ರೈಲು ನಿಲ್ದಾಣದ ಸೂಪರಿಂಟೆಂಡೆಂಟ್‌ ಅವರಿಗೆ ಅಂಚೆ ಮೂಲಕ ಅ.10ರಂದು ಪತ್ರವೊಂದು ಬಂದಿದೆ. ಪತ್ರ ಬರೆದಿರುವ ವ್ಯಕ್ತಿಯು ತನ್ನನ್ನು ಜೈಶ್‌-ಎ- ಮೊಹಮ್ಮದ್‌ ಉಗ್ರ ಸಂಘಟನೆಯ ವಲಯ ಕಮಾಂಡರ್‌ ಜಮೀರ್‌ ಅಹಮ್ಮದ್‌ ಎಂದು ಪರಿಚಯಿಸಿಕೊಂಡಿದ್ದಾನೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿರುವ ಜಿಹಾದಿಗಳ ಹತ್ಯೆಗೆ ಪ್ರತೀಕಾರವಾಗಿ ಅ.25 ಮತ್ತು 27ರಂದು ಬಾಂಬ್‌ ದಾಳಿ ನಡೆಸಲಾಗುವುದು ಎಂದು ಪತ್ರದಲ್ಲಿ ಬರೆಯಲಾಗಿದೆ ಎಂದು ರೈಲ್ವೆ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿಂದೆಯೂ ಇದೇ ರೀತಿಯ ಬೆದರಿಕೆ ಪತ್ರಗಳು ಬಂದಿದ್ದವು. ಆದರೆ ಇದೇ ಮೊದಲ ಬಾರಿಗೆ ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪತ್ರದ ಅಸಲಿಯತ್ತಿನ ಬಗ್ಗೆ ತನಿಖೆ ನಡೆಯುತ್ತಿದೆ. ಇದೇ ವೇಳೆ ರಾಜ್ಯದ ಪ್ರಮುಖ ದೇವಾಲಯಗಳು, ಪ್ರವಾಸಿ ತಾಣಗಳು ಮತ್ತು ರೈಲು ನಿಲ್ದಾಣಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next