Advertisement

“ರವಿಚಂದ್ರ’ಬಳಗ ಸೇರಿದ “ಕುರುಕ್ಷೇತ್ರ’ದ ಉತ್ತರೆ

10:00 AM Jan 14, 2020 | Lakshmi GovindaRaj |

ಕಳೆದ ವರ್ಷ ತೆರೆಕಂಡ ಮುನಿರತ್ನ ನಿರ್ಮಾಣದ “ಕುರುಕ್ಷೇತ್ರ’ ಚಿತ್ರದಲ್ಲಿ ಉತ್ತರೆ ಪಾತ್ರದಲ್ಲಿ ಕಾಣಿಸಿಕೊಂಡು ನೋಡುಗರ ಗಮನ ಸೆಳೆದಿದ್ದ ನಟಿ ಅದಿತಿ ಆರ್ಯ, ಈಗ ಕನ್ನಡದ ಮತ್ತೂಂದು ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ರಿಯಲ್‌ ಸ್ಟಾರ್‌ ಉಪೇಂದ್ರ ಹಾಗೂ ಕ್ರೇಜಿಸ್ಟಾರ್‌ ರವಿಚಂದ್ರನ್‌ ಮೊದಲ ಬಾರಿಗೆ ಒಟ್ಟಾಗಿ ಅಭಿನಯಿಸುತ್ತಿರುವ “ರವಿಚಂದ್ರ’ ಚಿತ್ರದಲ್ಲಿ ನಟಿ ಅದಿತಿ ಆರ್ಯ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

Advertisement

ತೆಲುಗಿನ “ಬಲಪು’ ಚಿತ್ರದ ಕನ್ನಡ ರಿಮೇಕ್‌ ಆಗಿರುವ “ರವಿಚಂದ್ರ’ ಔಟ್‌ ಆ್ಯಂಡ್‌ ಔಟ್‌ ಕಮರ್ಶಿಯಲ್‌ ಎಂಟರ್‌ಟೈನ್ಮೆಂಟ್‌ ಚಿತ್ರವಾಗಿದ್ದು, ಚಿತ್ರದಲ್ಲಿ ಈಗಾಗಲೇ ನಾಯಕಿಯರಾಗಿ ಶಾನ್ವಿ ಶ್ರೀವಾತ್ಸವ್‌ ಹಾಗೂ ನಿಮಿಕಾ ರತ್ನಾಕರ್‌ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ “ರವಿಚಂದ್ರ’ ತಂಡಕ್ಕೆ ಅದಿತಿ ಕೂಡ ಸೇರ್ಪಡೆಗೊಂಡಿದ್ದಾರೆ.

ಚಿತ್ರದಲ್ಲಿ ಅದಿತಿ ಯಾವ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ. “ರವಿಚಂದ್ರ’ ಚಿತ್ರವನ್ನು ಓಂ ಪ್ರಕಾಶ್‌ ರಾವ್‌ ನಿರ್ದೇಶಿಸುತ್ತಿದ್ದು, ಚಿತ್ರದ ಹಾಡುಗಳಿಗೆ ಅರ್ಜುನ್‌ ಜನ್ಯ ಸಂಗೀತ ಸಂಯೋಜಿಸುತ್ತಿದ್ದಾರೆ. ಸದ್ಯ ಚಿತ್ರದ ಚಿತ್ರೀಕರಣ ಯಶಸ್ವಿಯಾಗಿ ಸಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next