Advertisement

Tunnel:120 ಗಂಟೆಗಳಿಂದ ಸುರಂಗದೊಳಗೆ ಸಿಲುಕಿದ್ದ 40 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಸ್ಥಗಿತ

05:48 PM Nov 17, 2023 | Team Udayavani |

ಡೆಹ್ರಾಡೂನ್:‌ ಉತ್ತರಕಾಶಿಯಲ್ಲಿನ ಸಿಲ್ಕ್ಯಾರಾ ಸುರಂಗದೊಳಗೆ ಸಿಲುಕಿದ್ದ 40 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾದ ಹಿನ್ನೆಲೆಯಲ್ಲಿ ಶುಕ್ರವಾರ (ನವೆಂಬರ್‌ 17) ರಕ್ಷಣಾ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ ಎಂದು ವರದಿ ತಿಳಿಸಿದೆ.

Advertisement

ಇದನ್ನೂ ಓದಿ:Mysore: ರಾತ್ರೋರಾತ್ರಿ ರೈತ ಮುಖಂಡರ ಬಂಧನ; ಠಾಣೆ ಎದುರು ಪ್ರತಿಭಟನೆ

ಕಳೆದ ಆರು ದಿನಗಳಿಂದ ಸುರಂಗದೊಳಗೆ ಸಿಲುಕಿದ್ದ 40 ಕಾರ್ಮಿಕರನ್ನು ರಕ್ಷಿಸಲು ಕಾರ್ಯಾಚರಣೆ ನಡೆಯುತ್ತಿತ್ತು. ಆದರೆ ಇಂದು ಮಧ್ಯಾಹ್ನ ಮತ್ತೆ ಮಣ್ಣು ಕುಸಿದ ಪರಿಣಾಮ ರಕ್ಷಣಾ ಕಾರ್ಯಾಚರಣೆ ಸ್ಥಗಿತಗೊಳಿಸಿರುವುದಾಗಿ ಮೂಲಗಳು ಹೇಳಿವೆ.

ರಕ್ಷಣಾ ಕಾರ್ಯಾಚರಣೆಗಾಗಿ 5ನೇ ಟ್ಯೂಬ್‌ ಅನ್ನು ಸುರಂಗದೊಳಗೆ ಇಳಿಸಿದಾಗ ಮಣ್ಣು ಕುಸಿಯಲು ಆರಂಭಿಸಿತ್ತು. ಇದರಿಂದಾಗಿ ಡ್ರಿಲ್ಲಿಂಗ್‌ ಮೆಷಿನ್‌ ಕಾರ್ಯಕ್ಕೆ ತೊಡಕಾಗಿತ್ತು. ಆ ನಿಟ್ಟಿನಲ್ಲಿ ಕಾರ್ಯಾಚರಣೆ ನಿಲ್ಲಿಸಲಾಗಿದೆ ಎಂದು ವರದಿ ವಿವರಿಸಿದೆ.

ಸಿಲ್ಕ್ಯಾರಾ ಸುರಂಗದೊಳಗೆ ಸಿಲುಕಿರುವ 40 ಕಾರ್ಮಿಕರನ್ನು ರಕ್ಷಿಸುವ ನಿಟ್ಟಿನಲ್ಲಿ ರಕ್ಷಣಾ ತಂಡ ಹಗಲು ರಾತ್ರಿ ಕಾರ್ಯಾಚರಣೆ ನಡೆಸಿತ್ತು. ಆದರೆ ದೊಡ್ಡ ಪ್ರಮಾಣದಲ್ಲಿ ಮಣ್ಣು ಕುಸಿದು ಬಿದ್ದಿದ್ದರಿಂದ ಕಾರ್ಯಾಚರಣೆ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ.

Advertisement

ಸುಮಾರು 30ರಿಂದ 40 ಮೀಟರ್‌ ನಷ್ಟು ಮಣ್ಣನ್ನು ಹೊರತೆಗೆಯಬೇಕಾಗಿದೆ. ಬಳಿಕ ಕಾರ್ಮಿಕರು ಸಿಲುಕಿರುವ ಸ್ಥಳವನ್ನು ತಲುಪಬಹುದಾಗಿದೆ. ಕಾರ್ಮಿಕರು ಈಗಾಗಲೇ ಸುರಂಗದಾಳದಲ್ಲಿ ಸಿಲುಕಿಕೊಂಡು 120 ಗಂಟೆಗಳು ಕಳೆದಿದೆ. ಏತನ್ಮಧ್ಯೆ ಆದಷ್ಟು ಶೀಘ್ರದಲ್ಲಿ ಕಾರ್ಮಿಕರನ್ನು ರಕ್ಷಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next