Advertisement

ಗ್ರಾ.ಪಂ.ಗಳಲ್ಲಿ ಸಿಬಂದಿ, ಅನುದಾನಗಳ ಕೊರತೆ- ಅಧಿವೇಶನದಲ್ಲಿ ಗಮನ ಸೆಳೆದ ಶಾಸಕಿ ಭಾಗೀರಥಿ

10:59 PM Feb 14, 2024 | Team Udayavani |

ಸುಳ್ಯ: ಅನುದಾನದ ಮತ್ತು ಅಧಿಕಾರಿ, ಸಿಬಂದಿಗಳ ಕೊರತೆಯಿಂದ ಗ್ರಾಮ ಪಂಚಾಯತ್‌ಗಳ ಕಾರ್ಯನಿರ್ವಹಣೆಯಲ್ಲಿ ಸಮಸ್ಯೆ ಎದುರಾಗುತ್ತದೆ ಎಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ವಿಧಾನಸಭೆಯಲ್ಲಿ ಗಮನ ಸೆಳೆದರು.

Advertisement

ರಾಜ್ಯ ವಿಧಾನಸಭೆಯ ಅಧಿವೇಶನದಲ್ಲಿ ಮಾತನಾಡಿದ ಶಾಸಕರು, ಅನುದಾನ ಬಾರದೆ ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ಹಾಗೂ ಸುಳ್ಯ ತಾಲೂಕಿನ ಹೊಸ ಗ್ರಾಮ ಪಂಚಾಯತ್‌ ಕಟ್ಟಡಗಳ ನಿರ್ಮಾಣ ಪೂರ್ತಿಗೊಂಡಿರುವುದಿಲ್ಲ. ಡಾಟಾ ಎಂಟ್ರಿ ಆಪರೇಟರ್‌ಗಳ ನೇಮಕ ಅರ್ಧಕ್ಕೆ ನಿಂತಿದೆ. ಅಧಿಕಾರಿ, ಸಿಬಂದಿಗಳ ಕೊರತೆ ಎದುರಾಗಿದೆ. ಅನುದಾನ ಬಿಡುಗಡೆ ಮಾಡಬೇಕು, ಜತೆಗೆ ಅಧಿಕಾರಿ, ಸಿಬಂದಿಗಳ, ಡಾಟಾ ಎಂಟ್ರಿ ಆಪರೇಟರ್‌ಗಳ ನೇಮಕ ಮಾಡಬೇಕು ಎಂದವರು ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಲಭ್ಯತೆಯ ಆಧಾರದ ಮೇಲೆ ಡಾಟಾ ಎಂಟ್ರಿ ಆಪರೇಟರ್‌ ಮತ್ತು ಸಿಬಂದಿಗಳ ನೇಮಕ ಮಾಡಲಾಗುವುದು ಹಾಗೂ ಅನುದಾನ ಒದಗಿಸಲಾಗುವುದು ಎಂದ ಸಚಿವರು ಇದಕ್ಕೆ ಸ್ವಲ್ಪ ಕಾಲಾವಕಾಶ ಬೇಕು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next