Advertisement

Nomination: ಭಾರಿ ಜನಸ್ತೋಮದ ನಡುವೆ ಮೆರವಣಿಗೆಯಲ್ಲಿ ತೆರಳಿ ವಿ.ಸೋಮಣ್ಣ ನಾಮಪತ್ರ ಸಲ್ಲಿಕೆ

05:31 PM Apr 19, 2023 | Team Udayavani |

ಚಾಮರಾಜನಗರ: ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ಸತಾಯ-ಗತಾಯ ಕಮಲ ಅರಳಿಸಬೇಕೆಂಬುದು ಬಿಜೆಪಿ ಹೆಬ್ಬಯಕೆಯಾಗಿದ್ದು, ಗೆಲುವಿನ ನಗೆ ತವಕದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಬುಧವಾರ ಬೃಹತ್ ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಸಿದರು.

Advertisement

ನಗರದ ಕೊಳದ ಗಣಪತಿ ದೇವಸ್ಥಾನ, ಮಾರಿಗುಡಿ, ಶ್ರೀಚಾಮರಾಜೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ  ನಗರದ ಕರಿನಂಜನಪುರ ರಸ್ತೆಯಲ್ಲಿ ಅಂಬೇಡ್ಕರ್ ಭವನದ ಪಕ್ಕದ ಮೈದಾನದಲ್ಲಿ ಹಾಕಲಾಗಿರುವ ವೇದಿಕೆಯಲ್ಲಿ ಪಕ್ಷದ ಕಾರ್ಯಕರ್ತರ ಸಭೆ ನಡೆಸಿ, ತೆರದ ವಾಹನದಲ್ಲಿ ಮೆರವಣಿಗೆ ಮೂಲಕ ಅಪಾರ ಜನಸ್ತೋಮದೊಂದಿಗೆ ತಹಶೀಲ್ದಾರ್ ಕಚೇರಿಗೆ ತೆರಳಿ ಚುನಾವಣಾಧಿಕಾರಿ ಯೋಗಾನಂದ ಅವರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಸೂಚಕರಾಗಿ ಸಂಸದ ಪ್ರತಾಪ್ ಸಿಂಹ,  ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ ಎಂ.ರಾಮಚಂದ್ರ, ವಿಧಾನ ಪರಿಷತ್ ಮಾಜಿ ಸದಸ್ಯ ಪ್ರೋ.ಕೆ.ಆರ್.ಮಲ್ಲಿಕಾರ್ಜುನಪ್ಪ,  ಜಿ.ಪಂ.ಮಾಜಿ ಅಧ್ಯಕ್ಷೆ ನಾಗಶ್ರೀ ಪ್ರತಾಪ್ ಹಾಜರಿದ್ದರು.

ಮೆರವಣಿಗೆಯಲ್ಲಿ ಸುಡುವ ಬಿಸಿಲನ್ನು ಲೆಕ್ಕಿಸದೆ  ಬಿಜೆಪಿ  ಕಾರ್ಯಕರ್ತರು ಭಾಗವಹಿಸಿದ್ದರು ಮೊಳಗಿದ ಜೈಕಾರ,  ಬಿಜೆಪಿ ಬಾವುಟ ರಾರಾಜಿಸಿತು.

ಮೆರವಣಿಗೆಯಲ್ಲಿ ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ಕೋಟೆ ಎಂ.ಶಿವಣ್ಣ,  ಎಂ.ಎಲ್ ಸಿ ಛಲವಾದಿ ನಾರಾಯಣಸ್ವಾಮಿ, ಶಾಸಕ ನಿರಂಜನ್ ಕುಮಾರ್,  ಬಿಜೆಪಿ ಜಿಲ್ಲಾಧ್ಯಕ್ಷ ನಾರಾಯಣಪ್ರಸಾದ್,  ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ,  ವಿಧಾನ ಪರಿಷತ್ ಮಾಜಿ ಸದಸ್ಯರಾದ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ,  ಸಿದ್ದರಾಜು, ಕಾಡಾಧ್ಯಕ್ಷ ನಿಜಗುಣರಾಜು   ನಗರಶಬಾ ಅಧ್ಯಕ್ಷೆವ ಆಶಾ ನಟರಾಜು, ಜಿ.ಪಂ.ಮಾಜಿ ಸದಸ್ಯರಾದ ಎ.ಆರ್.ಬಾಲರಾಜ್, ಬಾಲರಾಜ್,  ಬಿಜೆಪಿ  ಜಿಲ್ಲಾ ವಕ್ತಾರ ಅಯ್ಯನಪುರ ಶಿವಕುಮಾರ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ನಾಗಶ್ರೀ ಪ್ರತಾಪ್,  ಮಂಗಲ ಶಿವಕುಮಾರ್,   ಮುಖಂಡರಾದ ಕೆಲ್ಲಂಬಳ್ಳಿ ಸೋಮನಾಯಕ,  ವೆಂಕಟರಮಣಸ್ವಾಮಿ  ( ಪಾಪು) ಯು.ಎಂ.ಪ್ರಭುಸ್ವಾಮಿ, ನೂರೊಂದು ಶೆಟ್ಟಿ, ಭಾಗವಹಿಸಿದ್ದರು.‌

ಇದನ್ನೂ ಓದಿ: India’s Happiest State; ಇದು…ಭಾರತದ ಸಂತೋಷ ಭರಿತ ರಾಜ್ಯವಂತೆ: ಸಮೀಕ್ಷೆ

Advertisement
Advertisement

Udayavani is now on Telegram. Click here to join our channel and stay updated with the latest news.

Next