Advertisement

ಬಾಲಗಂಗಾಧರನಾಥ ಸ್ವಾಮೀಜಿ ಕಂಚಿನ ಪ್ರತಿಮೆ ಅನಾವರಣ ಮಾಡಿದ ವಿ ಸೋಮಣ್ಣ

01:21 PM May 14, 2021 | Team Udayavani |

ಬೆಂಗಳೂರು : ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಎಂ ಸಿ ಬಡಾವಣೆಯಲ್ಲಿರುವ ಶ್ರೀ ಬಾಲಗಂಗಾಧರನಾಥ ಸ್ವಾಮಿಜಿ ಆಟದ ಮೈದಾನದಲ್ಲಿ ಪರಮ ಪೂಜ್ಯರಾದ ಶ್ರೀ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯ ಕಂಚಿನ ಪ್ರತಿಮೆಯನ್ನು ನಿರ್ಮಲಾನಂದ ಸ್ವಾಮೀಜಿಗಳ ಆಶೀರ್ವಾದದೊಂದಿಗೆ ವಸತಿ ಸಚಿವರಾದ ವಿ ಸೋಮಣ್ಣರವರು ಅನಾವರಣಗೊಳಿಸಿದರು.

Advertisement

ಇದೇ ವೇಳೆ ಮಾತನಾಡಿದ ಸೋಮಣ್ಣ ಕೋವಿಡ್  ತಡೆಗಟ್ಟಲು ತಜ್ಞರ ಸಮಿತಿಯ ವರದಿಯಂತೆ ಸರ್ಕಾರವು ಹಲವು ಕ್ರಮಗಳನ್ನು ಕೈಗೊಂಡಿದೆ.  ಈ ಬಾರಿಯ ಲಾಕ್ ಡೌನ್  ನಲ್ಲಿ ಸರ್ಕಾರವು ಬೀದಿ ವ್ಯಾಪಾರಿಗಳ ಜೀವನಕ್ಕಾಗಿ ಹಾಗೂ ಸಾರ್ವಜನಿಕರ ದಿನಸಿ ಆಹಾರಕ್ಕಾಗಿ ಸಮಯವನ್ನು ನಿಗದಿ ಪಡಿಸಿ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮಾಡಿದೆ ಎಂದರು.

ಮುಂದಿನ ದಿನಗಳಲ್ಲಿ ಪ್ರತಿಯೊಬ್ಬ ಸಾರ್ವಜನಿಕರಿಗೂ ಲಸಿಕೆ ಸಿಗುವಂತಹ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. ಇನ್ನು ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ವಿಜಯನಗರ ಶಾಖೆ ಆದಿಚುಂಚನಗಿರಿ ಮಠದ ಸ್ವಾಮೀಜಿಗಳಾದ ಸೌಮ್ಯನಾಥ ಸ್ವಾಮೀಜಿರವರು ,ಮಂಡಲದ ಅಧ್ಯಕ್ಷರಾದ ವಿಶ್ವನಾಥ್ ಗೌಡರವರು , ಬಿಬಿಎಂಪಿ ಮಾಜಿ ಸದಸ್ಯರುಗಳಾದ ಉಮೇಶ್ ಶೆಟ್ಟಿ ,ರಾಮಪ್ಪ, ರಾಮಚಂದ್ರ ಶಕುಂತಲಾ ದೊಡ್ಡಲಕ್ಕಪ್ಪ , ವಾಗೇಶ್, ಉಮಾಶಂಕರ್ ಹಾಗೂ ಇತರೆ ಗಣ್ಯರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next