Advertisement

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

09:59 PM May 01, 2024 | Team Udayavani |

ದಾವಣಗೆರೆ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹವಾ ಚೆನ್ನಾಗಿದ್ದು, 25ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದೇ ಗೆಲ್ಲುತ್ತದೆ. ಇದನ್ನು ಅರಿತು ಹರಿಹರದ ವಚನಾನಂದ ಸ್ವಾಮೀಜಿ ಆಶೀರ್ವಾದ ಮಾಡುವುದಕ್ಕೆ ಬಿಜೆಪಿಯವರನ್ನು ಕರೆಯುತ್ತಿದ್ದಾರೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಯತ್ನಾಳ್‌ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಚನಾನಂದ ಸ್ವಾಮೀಜಿ ಇಷ್ಟು ದಿನ ಕಾಂಗ್ರೆಸ್‌ಗೆ ಮತ ಹಾಕುವಂತೆ ಹೇಳುತ್ತಿದ್ದರು. ಈಗ ಪ್ರಹ್ಲಾದ ಜೋಷಿಗೆ ಆಶೀರ್ವಾದ ಮಾಡುತ್ತೇವೆ ಬನ್ನಿ ಎಂದಿದ್ದಾರೆ. ಸಿದ್ದೇಶ್ವರ ಅವರಿಗೆ ಗುರುವಾರ ಭೇಟಿ ಮಾಡುವಂತೆ ಹೇಳಿದ್ದಾರೆ. ಇಲ್ಲಿಯವರೆಗೆ ಭೇಟಿಗೆ ಅವಕಾಶ ಕೊಟ್ಟಿರಲಿಲ್ಲ.

ವಿಜಯಾನಂದ ಕಾಶಪ್ಪನವರ್‌ ಒಂದು ವರ್ಷ ಆಯಿತು, ಬಾಯಿ ತೆಗೆದಿಲ್ಲ ಅವನು. ತನ್ನ ಹೆಂಡತಿಗೆ ಟಿಕೆಟ್‌ ಕೊಡಿಸಲು ಆಗಲಿಲ್ಲ. ಇನ್ನು ಮೀಸಲಾತಿ ಎಲ್ಲಿ ಕೊಡಿಸುತ್ತಾನೆ ಎಂದರು.

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next