Advertisement
ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ’ ಅಡಿಯಲ್ಲಿ ನೂತನ 65 ಆ್ಯಂಬುಲೆನ್ಸ್ಗಳನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿ ನಮ್ಮ ಸರಕಾರ ರಸ್ತೆ ಸುರಕ್ಷೆಗೆ ಆದ್ಯತೆ ನೀಡುತ್ತಿದ್ದು, ಅಪಘಾತ ಪ್ರಕರಣಗಳಲ್ಲಿ ಸಾವುನೋವು ತಡೆಯಲು ವಿವಿಧ ಕಾರ್ಯಕ್ರಮಗಳನ್ನು ಹಾಕಿಕೊಳ್ಳುತ್ತಿದೆ. ಆದರೆ ಸಂಚಾರ ನಿಯಮಗಳ ಉಲ್ಲಂಘನೆ ನಡೆಯುತ್ತಲೇ ಇದೆ. ಹೀಗಾಗಿ ಗಂಭೀರ ಸ್ವರೂಪದಲ್ಲಿ ಸಂಚಾರ ನಿಯಮ ಉಲ್ಲಂ ಸುವವರ ವಾಹನ ಚಾಲನೆ ಪರವಾನಿಗೆ ರದ್ದು ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ವೇದಿಕೆಯಲ್ಲಿದ್ದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸೂಚನೆ ನೀಡಿದರು.
Related Articles
Advertisement
ರಾಜ್ಯದಲ್ಲಿ ಪ್ರತೀ ವರ್ಷ ಸರಾಸರಿ 40 ಸಾವಿರ ಅಪಘಾತಗಳು ಸಂಭವಿಸುತ್ತಿದ್ದು, ಪ್ರತೀ ವರ್ಷ ಸರಾಸರಿ ಹತ್ತು ಸಾವಿರ ಮಂದಿ ಸಾವನ್ನಪ್ಪುತ್ತಿದ್ದಾರೆ. ರಸ್ತೆ ಅಪಘಾತಗಳಿಂದಾಗಿ ಅನೇಕರು ಜೀವಮಾನವಿಡೀ ನರಳಬೇಕಾಗುತ್ತದೆ. ಅಪಘಾತ ನಡೆದ ಒಂದು ತಾಸಿನ ಒಳಗೆ ಸರಿಯಾದ ಚಿಕಿತ್ಸೆ ಲಭಿಸಿದರೆ ಪ್ರಾಣ ಹಾನಿ ತಪ್ಪಿಸಬಹುದು ಎಂಬ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತಂದಿದ್ದೇವೆ ಎಂದು ಹೇಳಿದರು.
ದೀಪ ಉರಿಸಲು ಬಿಡದ ಗಾಳಿ!
ಕಾರ್ಯಕ್ರಮದ ಉದ್ಘಾಟನೆಗೆ ಮುಖ್ಯಮಂತ್ರಿಗಳು ದೀಪ ಬೆಳಗಲು ಮುಂದಾದಾಗ ಗಾಳಿ ಬೀಸುತ್ತಿದ್ದುದರಿಂದ ಮೋಂಬತ್ತಿ ಉರಿಸಲು ಹಲವು ಬಾರಿ ಯತ್ನಿಸಿದರೂ ಸಾಧ್ಯವಾಗಲಿಲ್ಲ. ಕೊನೆಗೆ ದೀಪದಲ್ಲಿದ್ದ ಹಲವು ಬತ್ತಿಗಳನ್ನು ಒಂದೆಡೆ ಕೂಡಿಸಿ, ರಾಮಲಿಂಗಾರೆಡ್ಡಿ ಮತ್ತು ದಿನೇಶ್ ಗುಂಡೂರಾವ್ ತಮ್ಮ ಕೈಗಳನ್ನು ಗಾಳಿ ಬೀಸುವ ದಿಕ್ಕಿಗೆ ಅಡ್ಡವಿಟ್ಟ ಬಳಿಕ ಮುಖ್ಯಮಂತ್ರಿಗಳಿಗೆ ದೀಪ ಬೆಳಗಲು ಸಾಧ್ಯವಾಯಿತು. ಆ್ಯಂಬುಲೆನ್ಸ್ ಕಾರ್ಯಾಚರಣೆ ಹೇಗೆ?
ಹೆಚ್ಚು ಅಪಘಾತ ಸಂಭವಿಸುವ ಸ್ಥಳಗಳನ್ನು ಗುರುತಿಸಲಾಗಿದ್ದು, ಹತ್ತಿರದ ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗಳಿಗೆ ಆ್ಯಂಬುಲೆನ್ಸ್ ನೀಡಲಾಗುತ್ತಿದೆ. ತುರ್ತು ಸಂದರ್ಭದಲ್ಲಿ ಇದರ ಸೇವೆ ಲಭ್ಯವಾಗಲಿದೆ. ಇವು ಸುಸಜ್ಜಿತ ಉಪಕರಣ ಮತ್ತು ಔಷಧ ಇತ್ಯಾದಿ ಹೊಂದಿರಲಿವೆ. ಸದ್ಯ ರಾಜ್ಯದ 26 ಜಿಲ್ಲಾಸ್ಪತ್ರೆಗಳಿಗೆ ಸುಧಾರಿತ ಆ್ಯಂಬುಲೆನ್ಸ್ ಒದಗಿಸಲಾಗಿದ್ದು, ಉಳಿದ 39 ಪ್ರಾಥಮಿಕ ಆ್ಯಂಬುಲೆನ್ಸ್ಗಳನ್ನು 20 ಜಿಲ್ಲೆಗಳ 39 ತಾಲೂಕು ಆಸ್ಪತ್ರೆಗಳಿಗೆ ನೀಡಲಾಗಿದೆ.