Advertisement

ಕಾಂಗ್ರೆಸ್‌ ಸದಸ್ಯತ್ವಕ್ಕೆ ವೈಜನಾಥ್‌ ರಾಜೀನಾಮೆ

12:30 AM Mar 13, 2019 | |

ಬೆಂಗಳೂರು: ಕಳೆದ ಬಾರಿಯ ಕಾಂಗ್ರೆಸ್‌ ಸರ್ಕಾರ ಹಾಗೂ ಈಗೀರುವ ಸಮ್ಮಿಶ್ರ ಸರ್ಕಾರ ಹೈದರಾಬಾದ್‌ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ನೀಡದಿರುವುದರಿಂದ ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಸದ್ಯದಲ್ಲಿಯೇ ಮುಂದಿನ ರಾಜಕೀಯ ನಡೆ ತಿಳಿಸಲಾಗುವುದು ಎಂದು ಮಾಜಿ ಸಚಿವ ವೈಜನಾಥ್‌ ಪಾಟೀಲ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಆರ್ಥಿಕ, ಶೈಕ್ಷಣಿಕವಾಗಿ ಮತ್ತು ಅಭಿವೃದಿಟಛಿಯಲ್ಲಿ ಹಿಂದುಳಿದ ಹೈ-ಕ ಪ್ರದೇಶಕ್ಕೆ ಸೌಕರ್ಯಗಳನ್ನು ಒದಗಿಸುವ ಸಲುವಾಗಿ ಸಂವಿಧಾನದಲ್ಲಿ 371ನೇ ಕಲಂ ತಿದ್ದುಪಡಿ ಗೊಳಿಸಲಾಯಿತು. ಇದರಿಂದ ಅಭಿವೃದಿಟಛಿಗಳ ಕಡೆಗೆ ಈ ಹಿಂದಿನ ಕಾಂಗ್ರೆಸ್‌ ಸರ್ಕಾರವಾಗಲಿ ಅಥವಾ ಈಗಿರುವ ಸಮ್ಮಿಶ್ರ ಸರ್ಕಾರವಾಗಲಿ ಪ್ರಾಮುಖ್ಯತೆ ನೀಡಿಲ್ಲ. ಈ ಬಗ್ಗೆ ಹಲವು ಬಾರಿ ಕಾಂಗ್ರೆಸ್‌ನ ಹಿರಿಯ ನಾಯಕರ
ಗಮನಕ್ಕೆ ತಂದರೂ ಯಾವುದೇ ಪ್ರಯೋಜ ನವಾಗದಿರು ವುದರಿಂದ ಬೇಸತ್ತು ಮಾ.8ರಂದು ರಾಜೀನಾಮೆ ನೀಡಲಾಗಿದೆ ಎಂದು ಹೇಳಿದರು.
 

Advertisement

Udayavani is now on Telegram. Click here to join our channel and stay updated with the latest news.

Next