Advertisement
ತಿರುಪತಿ ತಿರುಮಲದಲ್ಲೂ ಭಾರೀ ಸಂಖ್ಯೆಯ ಭಕ್ತರು ಆಗಮಿಸಿದ್ದು ವೆಂಕಟೇಶ್ವರನ ದರ್ಶನಕ್ಕಾಗಿ ಉದ್ಧನೆಯ ಸರತಿಯ ಸಾಲುಗಳಲ್ಲಿ ನಿಂತಿದ್ದಾರೆ. ತಿರುಮಲದಲ್ಲಿ ಕೇಂದ್ರ ಸಚಿವರು,ರಾಜ್ಯ ಸಚಿವರು , ಶಾಸಕರುಗಳು ಸೇರಿದಂತೆ ವಿವಿಧ ರಾಜ್ಯದಿಂದ ಗಣ್ಯಾತೀಗಣ್ಯರು ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ಇಂದು ಸುಮಾರು 2 ಲಕ್ಷ ಭಕ್ತರು ಆಗಮಿಸುವ ಸಾಧ್ಯತೆಗಳಿರುವುದಾಗಿ ಅಂದಾಜಿಸಲಾಗಿದೆ. ಭಕ್ತಿರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
Related Articles
Advertisement
ಮಲ್ಲೇಶ್ವರದ ವೈಯ್ನಾಲಿಕಾವಲ್ನ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಮುಂಜೆ 4.30ರಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದಾರೆ.
ಬೆಂಗಳೂರಿನ ಶ್ರೀನಗರದ ವೆಂಕಟೇಶ್ವರ ದೇವಸ್ಥಾನ, ಚಾಮರಾಜಪೇಟೆಯ ಕೋಟೆ ವೆಂಕಟರಮಣಸ್ವಾಮಿ ದೇವಸ್ಥಾನ, ರಾಜರಾಜೇಶ್ವರಿನಗರದ ವೆಂಕಟರಮಣಸ್ವಾಮಿ ದೇವಸ್ಥಾನಗಳೂ ಸೇರಿದಂತೆ ರಾಜ್ಯದ ವಿವಿಧೆಡೆ ಶ್ರೀನಿವಾಸ ದೇವಾಲಯಗಳು ಭಕ್ತರಿಂದ ತುಂಬಿ ತುಳುಕುತ್ತಿವೆ.
ದಕ್ಷಿಣ ಭಾರತದಲ್ಲಿ ಏಕಾದಶಿಯನ್ನು ವಿಶೇಷವಾಗಿ ಆಚರಿಸಲಾಗುತ್ತಿದ್ದು, ವೈಕುಂಠ ಏಕಾದಶಿಯನ್ನು ಆಂಧ್ರ ಮತ್ತು ತೆಲಂಗಾಣದಲ್ಲಿ ತಿರುಮಲ ಏಕಾದಶಿ ಎಂದು ಕರೆದರೆ, ಕೇರಳದಲ್ಲಿ ಮುಕ್ಕೋಟಿ ಏಕಾದಶಿ ಮತ್ತು ಸ್ವರ್ಗಾವತಿಲ್ ಎಂಬ ಹೆಸರಿನಲ್ಲಿ ಆಚರಿಸಲಾಗುತ್ತಿದೆ.
ಕ್ಷೀರ ಸಾಗರ ಯೋಗ ಮುದ್ರೆಯಲ್ಲಿ ಶೇಷಸಾಯಿ ಮೇಲೆ ಶಯನಿಸಿದ ಶ್ರೀ ಹರಿಯು ಎದ್ದ ದಿನವನ್ನು ಏಕಾದಶಿಯನ್ನಾಗಿ ಆಚರಿಸಲಾಗುತ್ತಿದೆ. ಹಿಂದೂ ಪುರಾಣಗಳ ಪ್ರಕಾರ ಇಂದು ವೈಕುಂಠದ ಬಾಗಿಲು ತೆರೆದಿರುವುದಾಗಿ ಪ್ರತೀತಿ ಇದ್ದು, ವೃತ ಆಚರಿಸಿದರೆ ಮೋಕ್ಷ ಪ್ರಾಪ್ತಿಯಾಗುವ ನಂಬಿಕೆ ಇದೆ.