Advertisement

Valmiki Corporation case: ನಾಗೇಂದ್ರ ಆಪ್ತರಿಗೆ ನೊಟೀಸ್ ನೀಡಿದ ಇಡಿ ಅಧಿಕಾರಿಗಳು

12:52 PM Jul 11, 2024 | Team Udayavani |

ಬಳ್ಳಾರಿ: ವಾಲ್ಮೀಕಿ ನಿಗಮದಲ್ಲಿನ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ವಿಚಾರಣೆಗೆ ಗೈರಾದ ಮಾಜಿ ಸಚಿವ ನಾಗೇಂದ್ರ ಆಪ್ತರಿಗೆ ಸಂಕಷ್ಟ ಎದುರಾಗಿದೆ. ಬಳ್ಳಾರಿಯಲ್ಲಿ ವಿಚಾರಣೆಗೆ ಹಾಜರಾಗದೇ ತಪ್ಪಿಸಿಕೊಂಡ ನಾಲ್ವರು ನಾಗೇಂದ್ರ ಆಪ್ತರಿಗೆ ಇಡಿ ಅಧಿಕಾರಿಗಳು ನೊಟೀಸ್ ಕೊಟ್ಟಿದ್ದಾರೆ.

Advertisement

ಬುಧವಾರ ಬಳ್ಳಾರಿಯ ನಾಗೇಂದ್ರ ಮನೆ ಮೇಲೆ ಇಡಿ ದಾಳಿ ಮಾಡಿದ್ದರು. ಹತ್ತು ಇಡಿ ಅಧಿಕಾರಿಗಳ ತಂಡದಿಂದ ದಾಳಿ ನಡೆಸಲಾಗಿತ್ತು. ಬೆಳಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಸುದೀರ್ಘ ಪರಿಶೀಲನೆ ನಡೆಸಿತ್ತು. ಇಡಿ ಅಧಿಕಾರಿಗಳ ದಾಳಿ ವೇಳೆ ನಾಗೇಂದ್ರ ಕುಟುಂಬಸ್ಥರು ಯಾರೂ ಮನೆಯಲ್ಲಿ ಇರಲಿಲ್ಲ. ಆಪ್ತ ಸಹಾಯಕ ಚೇತನ್ ಹಾಗೂ ಮಾಧ್ಯಮ ಸಲಹೆಗಾರ ನಾಗರಾಜ್ ವಿಚಾರಣೆ ನಡೆಸಲಾಗಿತ್ತು.

ಇವರಷ್ಟೇ ಅಲ್ಲದೇ ನಾಗೇಂದ್ರ ಅವರ ಇನ್ನು ನಾಲ್ವರು ಆಪ್ತರಿಗೆ ವಿಚಾರಣೆಗೆ ಬರುವಂತೆ ಇಡಿ ಅಧಿಕಾರಿಗಳು ಹೇಳಿದ್ದರು. ಆದರೆ ನಾಗೇಂದ್ರ ಅವರ ನಾಲ್ಕು ಜನ ಆಪ್ತರು ಇಡಿ ಅಧಿಕಾರಿಗಳ ಕೈಗೆ ಸಿಗದೇ ತಪ್ಪಿಸಿಕೊಂಡಿದ್ದಾರೆ. ಇದೀಗ ವಿಚಾರಣೆಗೆ ಗೈರಾದವರಿಗೆ ಇಡಿ ನೊಟೀಸ್ ಕೊಟ್ಟಿದೆ.

ಬೆಂಗಳೂರಿನ ಇಡಿ ಕಚೇರಿಗೆ ಬಂದು ವಿಚಾರಣೆ ಎದುರಿಸುವಂತೆ ಸೂಚಿಸಲಾಗಿದೆ. ಖಾಸಗಿ ಆಪ್ತ ಸಹಾಯಕ ವಿಜಯ್ ಕುಮಾರ್ ಸೇರಿದಂತೆ ನಾಲ್ಕು ಜನರಿಗೆ ಇಡಿ ಬುಲಾವ್ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next