Advertisement

Valmiki Corporation scam; ಹಲವೆಡೆ ನಾಗೇಂದ್ರ ಆಪ್ತರ ಮನೆ ಮೇಲೆ ಇಡಿ ದಾಳಿ

12:13 PM Aug 28, 2024 | |

ಬಳ್ಳಾರಿ : ವಾಲ್ಮಿಕಿ ಅಭಿವೃದ್ಧಿ ನಿಗಮ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಬಳ್ಳಾರಿ, ಕೊಪ್ಪಳ ರಾಯಚೂರಿನಲ್ಲಿ ಇಡಿ ಅಧಿಕಾರಿಗಳು ಬುಧವಾರ ಬೆಳಗ್ಗೆ(ಆ 28) ದಾಳಿ ನಡೆಸಿದ್ದಾರೆ. ಬಳ್ಳಾರಿಯ ವಿವಿಧೆಡೆ ಮತ್ತೊಮ್ಮೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆ ಮೇಲೆ ದಾಳಿ ನಡೆಸಲಾಗಿದೆ.

Advertisement

ನಾಗೇಂದ್ರ ಸಂಬಂಧಿ ಎರ್ರಿಸ್ವಾಮಿ ಮನೆ ಸೇರಿದಂತೆ ಕೆಲ ಆಪ್ತ ಸಹಾಯಕರು ಮತ್ತು ಆಪ್ತರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಜಾರ್ಜ್ ಶೀಟ್ ಸಲ್ಲಿಕೆಗೆ ಸಮಯ ಹತ್ತಿರ ಬಂದಿರುವುದರಿಂದ ಇಡಿ ದಾಳಿ ನಡೆದಿದ್ದು, ಬೆಂಗಳೂರಿನಿಂದ ಎರಡು ಕಾರುಗಳಲ್ಲಿ ಬಂದಿರುವ ಮೂವರು ಇಡಿ ಅಧಿಕಾರಿಗಳು, ಇಬ್ಬರು ಭದ್ರತಾ ಸಿಬಂದಿಗಳು ಪರಿಶೀಲನೆ ನಡೆಸಿದ್ದಾರೆ. ಬೆಳಗ್ಗೆ 7 ಗಂಟೆ ಸುಮಾರಿಗೆ ಆರ್ ಟಿಒ ಕಚೇರಿ ಬಳಿಯ ಎರ್ರಿಸ್ವಾಮಿ ನಿವಾಸಕ್ಕೆ ಬಂದಿದ್ದ ಇಡಿ ಅಧಿಕಾರಿಗಳು, ಮೊದಲು ಮನೆಯ ಮುಂದಿನ ರಸ್ತೆಯಲ್ಲಿ ಅತ್ತ ಇತ್ತ ಸಂಚರಿಸಿ, ಪರಿಶೀಲಿಸಿದ ಬಳಿಕ ಮನೆಗೆ ದಾಳಿ ನಡೆಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next